July 3, 2026
Mumbai News Kannada
ಸುದ್ದಿ

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ, ಅಪರೂಪದ ಸಾಧಕ ಹೊಸಬೆಟ್ಟು ಕೆ. ಆರ್. ಪುತ್ರನ್ ನಿಧನ





ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ. ಆರ್. ಪುತ್ರನ್(94) ಅವರು ಇಂದು ಮಂಗಳೂರಿನಲ್ಲಿ ನಿಧನರಾದರು. ಮೊಗವೀರ ಮಂಡಳಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ 3 ದಶಕಗಳ ಕಾಲ ತಮ್ಮ ಸಮಯವನ್ನು ನೀಡಿ ಮಂಡಳಿಯನ್ನು ತಮ್ಮ ಶಿಸ್ತು ಬದ್ಧ ನೀತಿಯಿಂದ ಸಮೃದ್ಧ ಗೊಳಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.

ಸಿ ಎ ಕಂಪನಿಯಲ್ಲಿ ಕೆಳಸ್ಥರದ ಸಿಬ್ಬಂದಿಯಾಗಿ ಸೇರಿ ತಮ್ಮ ಪ್ರತಿಭೆ ಮತ್ತು ಸಾಧನೆಯಿಂದ ಸಿ ಎ ಪದವಿ ಗಳಿಸಿ ಅದೇ ಕಂಪೆನಿಯಲ್ಲಿ ಪಾಲುದಾರರಾಗಿ ನೇಮಕಗೊಂಡ ಓರ್ವ ಅಪರೂಪದ ರಾತ್ರಿ ಶಾಲೆಯ ವಿದ್ಯಾರ್ಥಿ.

ಅನೇಕ ಸಂಘಟನೆಗಳಿಗೆ ಆರ್ಥಿಕ ಮಾರ್ಗದರ್ಶಕ ರಾಗಿದ್ದ ಅವರ ನಿಧನಕ್ಕೆ ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕಾಂಚನ್ ಹಾಗೂ ಸದಸ್ಯರು, ವಿವಿಧ ಸಂಘಟನೆಗಳ ಮುಖ್ಯಸ್ಥರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಪುತ್ರನ್ ಅವರು ಓರ್ವ ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಹಾಗೂ ಬಂಧು ಬಾಂಧವರನ್ನು ಅಗಲಿದ್ದಾರೆ.



Related posts

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಮಂಗಳೂರು ವಿವಿ ಘಟಿಕೋತ್ಸವ : ರೋಹನ್ ಮೊಂತೇರೋ, ಕನ್ಯಾನ ಸದಾಶಿವ ಶೆಟ್ಟಿ, ಎಂ. ಎನ್ ರಾಜೇಂದ್ರಕುಮಾರ್ ಗೆ ಗೌರವ ಡಾಕ್ಟರೇಟ್

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುನಿರಾಜ್ ಜೈನ್ ಮತ್ತು ದಿ. ನ್ಯಾ. ಸುಭಾಷ್ ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk

ದೆಹಲಿ ಹೋಟೆಲ್ ಅಗ್ನಿ ದುರಂತ: 21 ಜನ ದುರ್ಮರಣ

Mumbai News Desk

ದುಬೈನಲ್ಲಿ 21 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ತೀಯಾ ಸಮಾಜ ಫ್ಯಾಮಿಲಿ.

Mumbai News Desk