30 C
Mumbai
April 24, 2026
Mumbai News Kannada
ಪ್ರಕಟಣೆ

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ





  ಮಂಗಳೂರಿನ  ಡಿ. 31: ಪ್ರದೀಪ್‌ ಕುಮಾರ್‌ ರೈ  ಅವರಿಗೆ ಸನ್ಮಾನ ಮಂಗಳೂರು: ಸುಳ್ಯ ಬಂಟರ ಯಾನೆ ನಾಡವರ ಸಂಘದಿಂದ ಡಿ. 31ರಂದು ಸಂಘದ ಬಂಟರ ಭವನದಲ್ಲಿ ಬಂಟ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಬಂಟರ ವಾಹಿನಿ ಸುದ್ದಿ ಮಾಸಪತ್ರಿಕೆಯ ಸಂಪಾದಕರಾದ. ಪತ್ರಕರ್ತ ಪ್ರದೀಪ್‌ ಕುಮಾರ್‌ ರೈ ಐಕಳಬಾವ ಅವರಿಗೆ ಸನ್ಮಾನ ನಡೆಯಲಿದೆ. ಪತ್ರಿಕಾರಂಗದಲ್ಲಿ ಅವರು ಮಾಡುತ್ತಿರುವ ಸಾಧನೆ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ. ಇವರ ಜತೆಗೆ ಇನ್ನೂ ಹಲವಾರು ಮಂದಿಗೆ ಸನ್ಮಾನ ನಡೆಯಲಿದೆ. ಅಂದು ಇಡೀ ದಿನ  ಕಾರ್ಯಕ್ರಮ ನಡೆಯಲಿದೆ.  ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳಿನ್‌ ಕುಮಾರ್‌, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ,,  ಮಂಗಳೂರಿನ ಹಿರಿಯ ಉದ್ಯಮಿ ಡಾ। ಎ. ಸದಾನಂದ ಶೆಟ್ಟಿ, ಶಾಸಕರಾದ ಅಶೋಕ್‌ ಕುಮಾರ್‌ ರೈ, ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ. ರಮಾನಾಥ ರೈ, ಬೆಂಗಳೂರು  ಬಂಟರ ಸಂಘದ ಅಧ್ಯಕ್ಷ ಮುರಳೀಧರ ಹೆಗ್ಡೆ,  ಗೃಹ ನಿರ್ಮಾಣ ಸಹಕಾರಿ  ಸಂಘ ಬೆಂಗಳೂರು  ಇದರ ಅಧ್ಯಕ್ಷ ಗುರುಪ್ರಸಾದ್‌ ರೈ ಮೊರಂಗಲ್ಲು, ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ,  ಎಣ್ಣೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಅದಿ ಬೈದೇರುಗಳ ಗರಡಿಯ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿ, ವಿದ್ಮಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ  ಸೀತಾರಾಮ ರೈ ಸವಣೂರು, ಸುಳ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್‌ ಶೆಟ್ಟಿ ಮುಂತಾದವರು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿರುವರು.



Related posts

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk