29 C
Mumbai
August 22, 2026
Mumbai News Kannada
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ





ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತ್ರತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ವಿಭಾಗದ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ಇತ್ತೀಚೆಗೆ ನೆಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿಯವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ ಮುಂಬಯಿ ವಿಭಾಗದ ಅಧ್ಯಕ್ಷ ಮಾಜಿ ಶಾಸಕ ಮಿಲಿಂದ್ (ಅಣ್ಣಾ) ಕಾಂಬ್ಳೆ ನಿಯುಕ್ತಿ ಪತ್ರವನ್ನು ನೀಡಿ ಶುಭ ಹಾರೈಸಿದರು.

ಮಹಾದೇವ ಪೂಜಾರಿ ಪರಿಚಯ :

ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು ಐದು ದಶಕಗಳ ಹಿಂದೆ ಮುಂಬಯಿ ಮಹಾನಗರಕ್ಕೆ ಪಾದಾರ್ಪಣೆಗೈದು ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ರಾತ್ರಿ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಿದರು. ಆ ಬಳಿಕ ವಿವಿಧ ಹಂತದಲ್ಲಿ ಮುನ್ನೆಡೆದು ವಿದ್ಯೆ-ಉದ್ಯೋಗ ಎರಡಕ್ಕೂ ಮಹತ್ವ ನೀಡಿ ಅದರಲ್ಲಿ ಯಶಸ್ವಿಯಾಗಿ ತದನಂತರ ಸ್ವಂತ ಉದ್ಯಮದತ್ತ ಒಲವು ತೋರಿ ಓರ್ವ ಉದ್ಯಮಿಯಾಗಿ ರೂಪುಗೊಂಡರು. ಉದ್ಯಮದ ಜೊತೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಇವರು ಗಾಂವ್ದೇವಿ ಪ್ರತಿಷ್ಠಾನ ಮುಂಬಯಿ ಇದರ ಅಧ್ಯಕ್ಷರಾಗಿ, ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ-ಸಂಸ್ಥೆಗಳ ಮೂಲಕ ಸಮಾಜಸೇವೆಗೈಯುತ್ತಿದ್ದಾರೆ. ತನ್ನ ಹುಟ್ಟೂರಿನ ಸಮುದಾಯ ಬಾಂಧವರನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ಇದೀಗ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುತ್ತಾರೆ.



Related posts

ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ‘ಈಶ್ವರಾನುಗ್ರಹ ಗೌರವ ಪುರಸ್ಕಾರ’ ಸಮರ್ಪಣೆ

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk

ಮಜ್ ಗಾಂವ್ ನ ರಾಜ್ ಕಮಲ್ ಟೈಲರ್ಸ್ ನ ಮಾಲಕ ದೇವಪ್ಪ ಪೂಜಾರಿ ನಿಧನ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk