July 7, 2026
Mumbai News Kannada
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ





ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಸಂಸದ ಶರದ್ ಪವಾರ್ ನೇತ್ರತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ವಿಭಾಗದ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ಇತ್ತೀಚೆಗೆ ನೆಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿಯವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ ಮುಂಬಯಿ ವಿಭಾಗದ ಅಧ್ಯಕ್ಷ ಮಾಜಿ ಶಾಸಕ ಮಿಲಿಂದ್ (ಅಣ್ಣಾ) ಕಾಂಬ್ಳೆ ನಿಯುಕ್ತಿ ಪತ್ರವನ್ನು ನೀಡಿ ಶುಭ ಹಾರೈಸಿದರು.

ಮಹಾದೇವ ಪೂಜಾರಿ ಪರಿಚಯ :

ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು ಐದು ದಶಕಗಳ ಹಿಂದೆ ಮುಂಬಯಿ ಮಹಾನಗರಕ್ಕೆ ಪಾದಾರ್ಪಣೆಗೈದು ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ರಾತ್ರಿ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಿದರು. ಆ ಬಳಿಕ ವಿವಿಧ ಹಂತದಲ್ಲಿ ಮುನ್ನೆಡೆದು ವಿದ್ಯೆ-ಉದ್ಯೋಗ ಎರಡಕ್ಕೂ ಮಹತ್ವ ನೀಡಿ ಅದರಲ್ಲಿ ಯಶಸ್ವಿಯಾಗಿ ತದನಂತರ ಸ್ವಂತ ಉದ್ಯಮದತ್ತ ಒಲವು ತೋರಿ ಓರ್ವ ಉದ್ಯಮಿಯಾಗಿ ರೂಪುಗೊಂಡರು. ಉದ್ಯಮದ ಜೊತೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಇವರು ಗಾಂವ್ದೇವಿ ಪ್ರತಿಷ್ಠಾನ ಮುಂಬಯಿ ಇದರ ಅಧ್ಯಕ್ಷರಾಗಿ, ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ-ಸಂಸ್ಥೆಗಳ ಮೂಲಕ ಸಮಾಜಸೇವೆಗೈಯುತ್ತಿದ್ದಾರೆ. ತನ್ನ ಹುಟ್ಟೂರಿನ ಸಮುದಾಯ ಬಾಂಧವರನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ಇದೀಗ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುತ್ತಾರೆ.



Related posts

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk