28 C
Mumbai
July 8, 2026
Mumbai News Kannada
ಸುದ್ದಿ

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ





ಪಶ್ಚಿಮ ಮಹಾರಾಷ್ಟ್ರದ ಇತಿಹಾಸ ಪ್ರಸಿದ್ಧ ಸಮಾಧಿ ಕ್ಷೇತ್ರವಾದ ಗಣೇಶಪುರಿಯ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ನವೀಕರಣಗೊಂಡ ಮೂರ್ತಿಯ ಪುನರ್ ಪ್ರತಿಷ್ಠಾಪನಾ ಮಹೋತ್ಸವವು ಇದೇ ಗುರುವಾರ (ಜುಲೈ 9) ಅತ್ಯಂತ ವೈಭವದಿಂದ ಜರಗಲಿದೆ.
ಮಂದಿರದ ಶ್ರೀ ಭೀಮೇಶ್ವರ ಸದ್ಗುರು ನಿತ್ಯಾನಂದ ಟ್ರಸ್ಟ್ ವತಿಯಿಂದ ಕಳೆದ ಏಪ್ರಿಲ್ 27 ರಂದು ಮೂರ್ತಿಯ ನವೀಕರಣ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಇದೀಗ ಈ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮೂರ್ತಿಯ ಶುದ್ಧೀಕರಣ ಹಾಗೂ ಸ್ಥಾಪನಾ ವಿಧಿಯ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳು ಜುಲೈ 5 ರಿಂದಲೇ ಆರಂಭಗೊಂಡಿವೆ.
ಇದರ ಮುಕ್ತಾಯದ ಅಂಗವಾಗಿ ಜುಲೈ 9 ರ ಗುರುವಾರದಂದು ನವೀಕರಣಗೊಂಡ ಮೂರ್ತಿಯ ಪುನರ್ ಪ್ರತಿಷ್ಠಾ ವಿಧಿ ವಿಧಾನಗಳು ದಿವ್ಯ ಸನ್ನಿಧಾನದಲ್ಲಿ ನೆರವೇರಲಿವೆ. ಈ ಅಪೂರ್ವ ಹಾಗೂ ಪಾವನ ಕ್ಷಣಕ್ಕೆ ಸಾಕ್ಷಿಯಾಗಲು ಶ್ರೀ ಗುರು ಭಕ್ತರು, ವಿಶೇಷವಾಗಿ ತುಳು-ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ‘ಶ್ರೀ ಸ್ವಾಮಿ ನಿತ್ಯಾನಂದ ಭಕ್ತ ಮಂಡಳಿ’ ವಿನಂತಿಸಿದೆ.
ವಿಶೇಷ ಸೂಚನೆ:
ಗುರುವಾರ ಮಧ್ಯಾಹ್ನದ ಮಂಗಳಾರತಿಯ ನಂತರ ಆಗಮಿಸುವ ಎಲ್ಲಾ ಸರ್ವ ಭಕ್ತಾದಿಗಳಿಗೆ ಮಂದಿರದ ಪವಿತ್ರ ಗರ್ಭಗುಡಿಯೊಳಗೆ ಪ್ರವೇಶಿಸಿ, ನೇರವಾಗಿ ದರ್ಶನ ಪಡೆಯಲು ವಿಶೇಷ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.



Related posts

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತಿದ್ದ ಇಬ್ಬರ ಬಂಧನ

Mumbai News Desk

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk