August 26, 2026
Mumbai News Kannada
ಪ್ರಕಟಣೆ

ಜುಲೈ 12: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್ ಶೈಕ್ಷಣಿಕ ಕಾರ್ಯಕ್ರಮ






​ಡೊಂಬಿವಲಿ: ಸಿರಿನಾಡ ವೆಲ್ಫೇರ್ ಅಸೋಸಿಯೇಷನ್‌ನ ಶೈಕ್ಷಣಿಕ ಕಾರ್ಯಕ್ರಮದ ಅಂಗವಾಗಿ ಇದೇ ಬರುವ ಜುಲೈ 12ರಂದು ಸಂಜೆ 4 ಗಂಟೆಗೆ ಡೊಂಬಿವಲಿ ಪಶ್ಚಿಮದ ಠಾಕೂರ್ವಾಡಿ ಪರಿಸರದ ‘ವೈಭವ ಮಂಗಳ ಕಾರ್ಯಾಲಯ’ದಲ್ಲಿ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಕನ್ನಡ ಕಲಿಕಾ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ, ಕಲಿಕಾ ತರಗತಿಯ ಶಿಕ್ಷಕಿಯರಿಗೆ ಗೌರವಾರ್ಪಣೆ ಹಾಗೂ ಕಲಿಕಾ ವಿದ್ಯಾರ್ಥಿಗಳಿಂದ ಶಿಕ್ಷಕಿಯರಿಗೆ ಗುರುವಂದನೆ ಕಾರ್ಯಕ್ರಮಗಳು ಜರಗಲಿವೆ.


​ಈ ಶೈಕ್ಷಣಿಕ ಕಾರ್ಯಕ್ರಮದ ಅಂಗವಾಗಿ ಸಭಾ ಕಾರ್ಯಕ್ರಮವೂ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆರ್. ಕೆ. ಸುವರ್ಣ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಶ್ರೀ ಕೃಷ್ಣ ಪಾಟೀಲ್ ಹಾಗೂ ಪರಿಸರದ ನಗರಸೇವಕಿ ಶ್ರೀಮತಿ ರಷಿಕಾ ಕೃಷ್ಣ ಪಾಟೀಲ್ ಅವರು ಆಗಮಿಸಲಿದ್ದಾರೆ. ವೇದಿಕೆಯಲ್ಲಿ ಸಲಹೆಗಾರರಾದ ಇಂದ್ರಾಳಿ ದಿವಾಕರ ಶೆಟ್ಟಿ, ರಾಜೀವ ಭಂಡಾರಿ ಮತ್ತು ವಸಂತ ಸುವರ್ಣ ಅವರು ಉಪಸ್ಥಿತರಿರಲಿದ್ದಾರೆ.


​ಸಂಘದ ರಜತ ಮಹೋತ್ಸವದ ಸರಣಿ ಕಾರ್ಯಕ್ರಮದ ಭಾಗವಾಗಿರುವ ಈ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಉಚಿತ ಪುಸ್ತಕವನ್ನು ಪಡೆಯಲು ಹೆಸರು ನೋಂದಾಯಿಸಿರುವ ಮಕ್ಕಳು, ಪ್ರತಿಭಾ ಪುರಸ್ಕಾರವನ್ನು ಪಡೆಯಲಿರುವ ವಿದ್ಯಾರ್ಥಿಗಳು, ಪಾಲಕರು, ಕನ್ನಡ ಕಲಿಕಾ ತರಗತಿಯ ವಿದ್ಯಾರ್ಥಿಗಳು ಹಾಗೂ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿರಬೇಕಾಗಿ ಸಂಘದ ಉಪಾಧ್ಯಕ್ಷ ಅಶೋಕ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಅಜೆಕಾರು ಜಯ ಶೆಟ್ಟಿ, ಕೋಶಾಧಿಕಾರಿ ಸದಾಶಿವ ಸಾಲಿಯಾನ್, ಜೊತೆ ಕಾರ್ಯದರ್ಶಿ ಶೋಭಾ ಟಿ. ಪೂಜಾರಿ, ಜೊತೆ ಕೋಶಾಧಿಕಾರಿ ಕೆ. ಕೆ. ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಉದಯ ಜೆ. ಶೆಟ್ಟಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ಸಚಿನ್ ಕೋಟ್ಯಾನ್ ಅವರು ವಿನಂತಿಸಿದ್ದಾರೆ.



Related posts

ಶ್ರೀ ರಜಕ ಸಂಘ ಮುಂಬಯಿ (ರಿ), ಜು. 21 ರಂದು 85ನೇ ವಾರ್ಷಿಕ ಮಹಾಸಭೆ

Mumbai News Desk

ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ೧೫ನೆಯ ವಾರ್ಷಿಕ ಸಮಾವೇಶ, “ಹೊರನಾಡಿನಲ್ಲಿ ತುಳುವರು” ಕೃತಿ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ನೃತ್ಯ ವೈಭವ ಹಾಗೂ ನಾಟಕ ಪ್ರದರ್ಶನ

Mumbai News Desk

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk

ಡಿ.24 ರಂದು ಭಂಡಾರಿ ಸೇವಾ ಸಮಿತಿ ಮುಂಬಯಿ  –  ಭಂಡಾರಿ  ಫ್ಯಾಮಿಲಿ ಫೆಸ್ಟಿವಲ್ 2023,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk