30 C
Mumbai
September 1, 2026
Mumbai News Kannada
ತುಳುನಾಡು

ಕಾಪು: ಸಹಕಾರ ತರಬೇತಿ ಕಾರ್ಯಕ್ರಮ ಯಶಸ್ವಿ ಚಾಲನೆ





ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಜಂಟಿ ಸಹಯೋಗದೊಂದಿಗೆ ಇಂದು (15-07-2026ನೇ ಬುಧವಾರ) ಒಂದು ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಲಾಖೆಯ ಅಧಿಕಾರಿಗಳಾದ ಅನುಷಾ ಹಾಗೂ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ,
ಸದಸ್ಯ ಶಿಕ್ಷಣ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾದ ಈ ‘ಕ್ಲಸ್ಟರ್ ಮಾದರಿ ಸಹಕಾರ ತರಬೇತಿ ಕಾರ್ಯಕ್ರಮವು ಕಾಪುವಿನ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಆವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.


ಸಹಕಾರ ಕ್ಷೇತ್ರದ ಬಲವರ್ಧನೆ ಹಾಗೂ ಸದಸ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಹಕಾರಿ ಬಂಧುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದಂತಹ ಎಲ್ಲರನ್ನು ಆದರದಿಂದ ಸ್ವಾಗತಿಸಲಾಯಿತು.


ಅಕ್ಷಯಧಾರ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಅಮಿತಾ ದೇವಾಡಿಗ ಉಪಸ್ಥಿತರಿದ್ದರು.



Related posts

ಉಡುಪಿ ಶೀರೂರು ಪರ್ಯಾಯ ಮಹೋತ್ಸವ: ಕಿನ್ನಿಮೂಲ್ಕಿಯಲ್ಲಿ ತಾರೆಯರ ಸಮಾಗಮ ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ

Mumbai News Desk

ಕೊಂಡೆವೂರು ಮಠದಲ್ಲಿ ಪ್ರತಿಷ್ಠಾವರ್ಧಂತಿ, ನವಚಂಡಿಕಾ ಯಾಗ . ಧಾರ್ಮಿಕ ಸಭೆ.

Mumbai News Desk

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Mumbai News Desk

ಕಾಪು: ಜನ ಮೆಚ್ಚಿದ ತಹಶೀಲ್ದಾರ್ ಡಾ. ಪ್ರತಿಭಾ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mumbai News Desk

ಮೂಲ್ಕಿ ಪುನರೂರು ಶ್ರೀದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk