ಮುಂಬಯಿ: ದಹಿಸರ್ (ಪೂರ್ವ) ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯಾದ ‘ಶ್ರೀ ಶನಿಮಹಾತ್ಮಾ ಸೇವಾ ಸಮಿತಿ (ರಿ.)’ ಇದರ 40ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 19-07-2026ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಸಂತೋಷ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆಯು ನಡೆಯಲಿದ್ದು, ಸಂಸ್ಥೆಯ ಎಲ್ಲಾ ಗೌರವಾನ್ವಿತ ಸದಸ್ಯರು ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿ, ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಾಗಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಮ ಎನ್. ಮೆಂಡನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.





