July 21, 2026
Mumbai News Kannada
ಪ್ರಕಟಣೆ

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ








​ಮುಂಬಯಿ: ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ, ಕ್ಷೇತ್ರದ ಸೇವಾಕರ್ತ ಲೋಕೇಶ್ ಬಜಾಲ್ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗಿರುವ 48 ವಾರಗಳ ಭಜನಾ ಸಂಕೀರ್ತನೆಯ ಅಂಗವಾಗಿ ಭಜನೆ ಮತ್ತು ಕುಣಿತ ಭಜನೆ ಕಾರ್ಯಕ್ರಮವು ಜುಲೈ 22ರ ಬುಧವಾರದಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರೀ ಕ್ಷೇತ್ರದ ರಾಜಾಂಗಣದಲ್ಲಿ ನಡೆಯಲಿದೆ. ಅಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಅಖಂಡ ಭಜನಾ ಸೇವೆ ನಡೆಯಲಿದ್ದು, ಸಂಜೆ 7 ಗಂಟೆಗೆ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರನಾರಾಯಣ ದೇವರಿಗೆ ರಂಗಪೂಜೆ ನೆರವೇರಲಿದೆ.


​ಈ ಪುಣ್ಯ ಕಾರ್ಯಕ್ರಮದ ಸೇವಾಕರ್ತರಾಗಿ ಮುಂಬಯಿಯ ಸಮಾಜ ಸೇವಕಿ ಹಾಗೂ ಮುಂಬೈ ಕುಲಾಲ ಸಂಘದ ಚರ್ಚ್ ಗೇಟ್-ದಹಿಸರ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರತ್ನಾ ಡಿ. ಕುಲಾಲ್, ಪತ್ರಕರ್ತ ಬಿ. ದಿನೇಶ್ ಕುಲಾಲ್ ಹಾಗೂ ಕಾನೂನು ವಿದ್ಯಾರ್ಥಿನಿ ಲಾಸ್ಯಾ ಡಿ. ಕುಲಾಲ್ ಭಾಗವಹಿಸಲಿದ್ದಾರೆ.


​ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವೀರನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದ.ಕ. ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಮತ್ತು ಸರ್ವ ಸದಸ್ಯರು, ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಸುಂದರ್ ಕುಲಾಲ್ ಶಕ್ತಿನಗರ ಮತ್ತು ಸರ್ವ ಸದಸ್ಯರು, ಸೇವಾ ಸಮಿತಿಯ ಅಧ್ಯಕ್ಷರಾದ ಕಿರಣ್ ಅಟ್ಲೂರು ಮತ್ತು ಸರ್ವ ಸದಸ್ಯರು ಹಾಗೂ ದೇವಸ್ಥಾನದ ಮಾತೃ ಮಂಡಳಿಯ ಅಧ್ಯಕ್ಷೆ ಮಮತಾ ದೇವದಾಸ್ ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ. ‌26 ರಂದು” ‘ಮುಲುಂಡ್  ಪಶ್ಚಿಮದಲ್ಲಿ *ಲಗ್ನಾ  ಪಿಶ್ಶ್ಯೆ’  ,ಕೊಂಕಣಿ ನಾಟಕ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ : ಅಂಧೇರಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಜ. 31ಕ್ಕೆ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk