July 23, 2026
Mumbai News Kannada
ಪ್ರಕಟಣೆ

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ








​ಭಾಯಂದರ್: ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಆರ್ಥಿಕ ನೆರವು ವಿತರಣೆ ಸಮಾರಂಭವನ್ನು ಜುಲೈ 26 ರಂದು ಸಂಜೆ 5.30ರಿಂದ ಭಾಯಂದರ್ (ಪೂರ್ವ) ಬಿ.ಪಿ. ರಸ್ತೆಯ ಗೊಡೆವ್ ನಾಕಾದಲ್ಲಿರುವ ಭಾರತ್ ಬ್ಯಾಂಕ್ ಮೇಲ್ಭಾಗದ ‘ಮಂಗಳಮೂರ್ತಿ ಸಭಾಂಗಣ’ದಲ್ಲಿ ಆಯೋಜಿಸಲಾಗಿದೆ.
​ಕಾರ್ಯಕ್ರಮದಲ್ಲಿ ಮೀರಾ-ಭಾಯಂದರ್ ಶಾಸಕ ನರೇಂದ್ರ ಎಲ್. ಮೆಹ್ತಾ, ಭಾರತ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಸುಮತಿ ಶಿಕ್ಷಣ ಸಂಸ್ಥೆಯ ಅರುಣೋದಯ ರೈ ಬೆಳ್ಳಿಯೂರು ಗುತ್ತು, ಮಾಜಿ ಕಾರ್ಪೊರೇಟರ್ ಅರವಿಂದ್ ಎ. ಶೆಟ್ಟಿ, ‘ಅರುಣ್ ಕಾಮರ್ಸ್ ಕ್ಲಾಸ್’ನ ಅರುಣ್ ಪಕ್ಕಳ ಶೆಟ್ಟಿ, ಬಂಟ್ಸ್ ಸಂಘ ಮುಂಬಯಿಯ ಜಂಟಿ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಮೀರಾ-ಭಾಯಂದರ್ ಪ್ರದೇಶ ಬಂಟ್ಸ್ ಸಂಘ ಮುಂಬಯಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿ, ಬಂಟ್ಸ್ ಫೋರಂ ಮೀರಾ-ಭಾಯಂದರ್ ಅಧ್ಯಕ್ಷ ಉದಯ ಶೆಟ್ಟಿ ಮಲ್ಲಾರು ಬೀಡು ಹಾಗೂ ‘ನಾಮ ಜವಾನರ್ (ರಿ.)’ ಮೀರಾ-ಭಾಯಂದರ್ ಅಧ್ಯಕ್ಷ ಚೇತನ್ ಎಸ್. ಶೆಟ್ಟಿ ಮೂಡಬಿದ್ರಿ ಭಾಗವಹಿಸಲಿದ್ದಾರೆ.
​ಇದಲ್ಲದೆ, ಸ್ಟಾರ್‌ವೇಸ್ ಎಲೆಕ್ಟ್ರಾನಿಕ್ಸ್‌ನ ತಿಮ್ಮಪ್ಪ ಪೂಜಾರಿ, ತುಳು ಕನ್ನಡ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಸುವರ್ಣ, ಕರ್ನಾಟಕ ಮಹಾ ಮಂಡಲ ಮೀರಾ-ಭಾಯಂದರ್ ಕಾರ್ಯದರ್ಶಿ ನಯನಾ ಆರ್. ಶೆಟ್ಟಿ, ಮಹಿಳಾ ಸಮಾಜದ ಶೋಭಾ ಶೇಖರ್ ಶೆಟ್ಟಿ (ಭಾಯಂದರ್), ಲತಾ ಸಂತೋಷ್ ಶೆಟ್ಟಿ (ಭಾಯಂದರ್), ದೇವಿಕಾ ಸದಾಶಿವ ಕರ್ಕೇರ (ನಲಸೋಪರ) ಹಾಗೂ ಸಬಿತಾ ಜಿ. ಪೂಜಾರಿ (ಕಾಂದಿವಲಿ) ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.
​ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಮತ್ತು ಅವರ ಶೈಕ್ಷಣಿಕ ಬೆಳವಣಿಗೆಗೆ ನೆರವು ನೀಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶ್ರೀ ಗುರು ನಾರಾಯಣ ಭಜನಾ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
​ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಗುರುನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಮಹಿಳಾ ವಿಭಾಗದ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಡಿ.25 ರಂದು ಕಲ್ಯಾಲು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನ ಕಲ್ಯಾಲು, ಇನ್ನಂಜೆ – ನೇಮೋತ್ಸವ.

Mumbai News Desk

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk