28 C
Mumbai
September 9, 2026
Mumbai News Kannada
ಪ್ರಕಟಣೆ

ಮುಲ್ಕಿ: ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಾರ್ವಜನಿಕರಿಗೆ ಸೇವೆಯ ಸದುಪಯೋಗ ಪಡೆದುಕೊಳ್ಳಲು ಕರೆ





ಮುಲ್ಕಿ ಶಾಂಭವಿ ಜೇಸಿ ಟ್ರಸ್ಟ್ (ರಿ.) ಹಾಗೂ ರೋಟರಿ ಕ್ಲಬ್ ಮುಲ್ಕಿ ಇವುಗಳ ಜಂಟಿ ಆಶ್ರಯದಲ್ಲಿ, ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಹಾಗೂ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಕುಂಟಿಕಾನ ಇವರ ಸಹಯೋಗದೊಂದಿಗೆ ಬೃಹತ್ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ವನ್ನು ಆಯೋಜಿಸಲಾಗಿದೆ.
ಈ ಶಿಬಿರವು 2026ರ ಆಗಸ್ಟ್ 2, ರವಿವಾರದಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 12-30ರ ವರೆಗೆ ಮುಲ್ಕಿಯ ಕಾರ್ನಾಡ್‌ನಲ್ಲಿರುವ ಸಿ.ಎಸ್.ಐ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಲಭ್ಯವಿರುವ ಸೇವೆಗಳು:

  • ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಹಾಗೂ ಅಗತ್ಯವಿರುವವರಿಗೆ ಉಚಿತ ಬಿ.ಪಿ.ಒ.ಬಿ./ಬಿ.ಪಿ.ಒ.ಎಲ್. ಕಾರ್ಡ್ ಮುಖಾಂತರ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ
  • ದಂತ ತಪಾಸಣೆ
  • ಚರ್ಮರೋಗ ತಪಾಸಣೆ
  • ಸಾಮಾನ್ಯ ಆರೋಗ್ಯ ತಪಾಸಣೆ (ಅಸ್ತಮಾ, ಅಲರ್ಜಿ ಇತ್ಯಾದಿ)
  • ಇಸಿಜಿ (ECG) ತಪಾಸಣೆ
  • ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ (BP & Sugar)

ಸಾರ್ವಜನಿಕರು ಈ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಆಯೋಜಕರು ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8050282520, 7353584573, 9483104506.



Related posts

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

Mumbai News Desk

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಆಗಸ್ಟ್‌ 29 : ಮುಂಬಯಿ ಕನ್ನಡ ಸಂಘದ 85ನೇ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk