July 27, 2026
Mumbai News Kannada
ಪ್ರಕಟಣೆ

ಕುರ್ಲಾ ಪೂರ್ವದ ಬಂಟರ ಭವನ, ಜುಲೈ 29: ಒಡಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಗುರುಪೂರ್ಣಿಮೆ ಆಚರಣೆ








​ಮುಂಬಯಿ ಜು: 26 – ಬಂಟರ ಸಂಘ ಮುಂಬಯಿ ಹಾಗೂ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಇವುಗಳ ಜಂಟಿ ಸಂಯೋಜನೆಯಲ್ಲಿ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜುಲೈ 29ರಂದು ಮಧ್ಯಾಹ್ನ 2.00 ಗಂಟೆಯಿಂದ 27ನೇ ವರ್ಷದ ಗುರುಪೂರ್ಣಿಮಾ ಆಚರಣೆ ಜರಗಲಿದೆ.
​ಈ ಸುಸಂದರ್ಭದಲ್ಲಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹಾಗೂ ಸಾಧ್ವಿ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ವಾರ್ಷಿಕೋತ್ಸವ – ಗುರುವಂದನಾ ಕಾರ್ಯಕ್ರಮ ನಡೆಯಲಿದೆ.
​ಆರಂಭದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಜೆ 6.00 ಗಂಟೆಗೆ ಮಹಾಮಂಗಳಾರತಿ, ಬಳಿಕ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ ಹಾಗೂ ಪ್ರಸಾದ ಮಂತ್ರಾಕ್ಷತೆ ವಿತರಣೆ ನಡೆಯಲಿದೆ.
​ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಬೇಕಾಗಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ ಬಳಗದ ಅಧ್ಯಕ್ಷರಾದ ದಾಮೋದರ ಎಸ್. ಶೆಟ್ಟಿ ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಡೊಂಬಿವಲಿ: ಶ್ರೀ ಜಗದಂಬಾ ಮಂದಿರದಲ್ಲಿ ಫೆ. 15ರಂದು ಮಹಾಶಿವರಾತ್ರಿ ಮಹೋತ್ಸವ; ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಭಜನೋತ್ಸವ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಎ. 12ಕ್ಕೆ ಏಕಾಹ ಭಜನೆ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk