July 30, 2026
Mumbai News Kannada
ತುಳುನಾಡು

ತೊಕ್ಕೊಟ್ಟಿನಲ್ಲಿ ಶ್ರೀ ಸಾಯಿ ಪರಿವಾರ್ ಟ್ರಸ್ಟ್‌ನಿಂದ ವಿಜೃಂಭಣೆಯ ಗುರುಪೂರ್ಣಿಮೆ ಕಾರ್ಯಕ್ರಮ: ಯಕ್ಷಗಾನ ಕಲಾವಿದ ಅಶ್ವಥ್ ಮಂಜನಾಡಿ ಅವರಿಗೆ ಸನ್ಮಾನ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣೆ







ತೊಕ್ಕೊಟ್ಟಿನ ಭಾಗದಲ್ಲಿ ಅಶಕ್ತ ಜನರಿಗೆ ಆಸರೆಯಾಗಿ ನಿಂತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡ ಶ್ರೀ ಸಾಯಿ ಪರಿವಾರ್ ಟ್ರಸ್ಟ್ (ರಿ.) ತೊಕ್ಕೊಟ್ಟು ಇದರ ಆಶ್ರಯದಲ್ಲಿ ‘ಹೊಂಬೆಳಕು’ ಸಭಾಂಗಣದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡು, ಅನೇಕ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಯಕ್ಷಗಾನ ನಾಟ್ಯ ತರಬೇತಿ ನೀಡುತ್ತಿರುವ ಅಪ್ರತಿಮ ಕಲಾವಿದ ಶ್ರೀ ಅಶ್ವಥ್ ಮಂಜನಾಡಿ ಅವರಿಗೆ ಪ್ರೀತ್ಯಾದರದ ಸನ್ಮಾನ ಹಾಗೂ ಗೌರವ ಸಮರ್ಪಣೆ ಮಾಡಲಾಯಿತು.


ಅಂತೆಯೇ, ಅಚ್ಚತುಳುವಿನಲ್ಲಿ ‘ತುಳುವ ಬೊಳ್ಳಿ’ ಎಂದೇ ಹೆಸರುವಾಸಿಯಾದ, ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಮಾನ್ಯ ದಯಾನಂದ ಕತ್ತಲ್‌ಸಾರ್ ಅವರು ಗುರುಪೂರ್ಣಿಮೆ ಕುರಿತು ಅರ್ಥಪೂರ್ಣ ವಿಚಾರಗಳನ್ನು ಹಂಚಿಕೊಂಡರು. ಇದೇ ವೇಳೆ ಅತ್ಯಂತ ಬಡ ಕುಟುಂಬಗಳಿಗೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಈ ಶುಭ ಸಂದರ್ಭದಲ್ಲಿ ಸಾಯಿ ಪರಿವಾರ್‌ ಟ್ರಸ್ಟ್‌ನ ಗೌರವಾನ್ವಿತ ಸದಸ್ಯರಾದ ಶ್ರೀ ಸುರೇಶ್ ಭಟ್ನಗರ್ ಅವರು ಶ್ರೀ ಸಾಯಿ ಪರಿವಾರ್ ಸಂಸ್ಥೆಯ ನೂತನ ವೆಬ್‌ಸೈಟ್ ಅನ್ನು ಲೋಕಾರ್ಪಣೆಗೊಳಿಸಿದರು. ಈ ವಿಶೇಷ ಸಭೆಯಲ್ಲಿ ಟ್ರಸ್ಟ್‌ನ ವಿಶ್ವಸ್ತರು ಹಾಗೂ ಗೌರವ ಸದಸ್ಯರು ಉಪಸ್ಥಿತರಿದ್ದರು. ಸಮಾರಂಭದ ಸಂಪೂರ್ಣ ವ್ಯವಸ್ಥೆ ಮತ್ತು ಸುಂದರ ನಿರೂಪಣೆಯನ್ನು ಪ್ರವೀಣ್ ಎಸ್. ಕುಂಪಲ ಅವರು ಯಶಸ್ವಿಯಾಗಿ ನೆರವೇರಿಸಿಕೊಟ್ಟರು.



Related posts

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk

ಯಂಗ್ ಮೆನ್ಸ್ ಬೋವಿ ಅಸೋಸಿಯೇಷನ್ ವತಿಯಿಂದ ಉಚ್ಚಿಲದಲ್ಲಿ ವಿಧ್ಯಾರ್ಥಿಗಳಿಗೆ ಕಂಪ್ಯೂಟರ್ ಸೆಟ್‌ ಹಾಗೂ ನೋಟ್‌ಬುಕ್‌ ವಿತರಣೆ

Mumbai News Desk

ತುಳುವೆರೆ ‘ತುಡರ ಪರ್ಬ’: ಬಲಿ ಚಕ್ರವರ್ತಿ ಬೊಕ್ಕ ಬೆನ್ನಿ ಸಂಸ್ಕೃತಿದ ಸಂಗಮ

Mumbai News Desk