28 C
Mumbai
September 18, 2026
Mumbai News Kannada
ಕರ್ನಾಟಕ

ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ ರಾಜ್ಯ ಸರ್ಕಾರದ ಗಮನಕ್ಕೆ





ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗದಿಂದ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ

ಬೆಂಗಳೂರು, ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, ಹೆಜಮಾಡಿ ಮತ್ತು ಪಡುಬಿದ್ರಿ ಭಾಗದ ಸಾರ್ವಜನಿಕರು ಟೋಲ್ ಸಂಗ್ರಹಣೆಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಜನಸ್ನೇಹಿ ವ್ಯವಸ್ಥೆ ಹಾಗೂ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕೆಪಿಸಿಸಿ ಕೋಆರ್ಡಿನೇಟರ್‌ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಹಾಗೂ ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.

ನಿಯೋಗವು ಹೆಜಮಾಡಿ–ಪಡುಬಿದ್ರಿ ಭಾಗದ ಜನರ ನ್ಯಾಯಸಮ್ಮತ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿತು. ಸಚಿವರು ಮನವಿಯನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಿರಂತರವಾಗಿದ್ದು, ನ್ಯಾಯ ದೊರೆಯುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.



Related posts

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk