August 8, 2026
Mumbai News Kannada
ಕರ್ನಾಟಕ

ಉಡುಪಿ: ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಶೂಟರ್‌ ಕಾಲಿಗೆ ಪೊಲೀಸ್‌ ಗುಂಡೇಟು, ಇಬ್ಬರು ಆರೋಪಿಗಳು ಪರಾರಿ





ಉಡುಪಿಯ ಕಾಂಗ್ರೆಸ್‌ ಮುಖಂಡ ಹಾಗೂ ಪ್ರಭಾವಿ ಉದ್ಯಮಿ ಡೇವಿಡ್‌ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ತನಿಖೆ ತೀವ್ರಗೊಂಡಿದ್ದು, ಕಾರ್ಯಾಚರಣೆಯ ವೇಳೆ ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಗಡಿಭಾಗದಲ್ಲಿರುವ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಈ ರೋಚಕ ಕಾರ್ಯಾಚರಣೆ ನಡೆದಿದ್ದು, ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಉತ್ತರ ಪ್ರದೇಶ (ಯುಪಿ) ಮೂಲದ ಶೂಟರ್‌ ರಾಜು ಎಂಬಾತನ ಬಲಗಾಲಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್‌ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ ನೇತೃತ್ವದ ಪೊಲೀಸ್‌ ತಂಡವು ಒತ್ತಿನಣೆ ಬಳಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲು ಯತ್ನಿಸಿತು. ಈ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ಏಕಾಏಕಿ ದಾಳಿ ನಡೆಸಲು ಮುಂದಾದಾಗ, ಪರಿಸ್ಥಿತಿಯನ್ನು ಹತೋಟಿಗೆ ತರಲು ಮತ್ತು ಆತ್ಮರಕ್ಷಣೆಗಾಗಿ ಪೊಲೀಸರು ಶೂಟರ್‌ ರಾಜು ಮೇಲೆ ಗುಂಡು ಹಾರಿಸಿದ್ದಾರೆ. ಈ ಘಟನಾತ್ಮಕ ಕಾರ್ಯಾಚರಣೆಯ ವೇಳೆ ಪಿಎಸ್‌ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗುಂಡೇಟಿನಿಂದ ತೀವ್ರ ಗಾಯಗೊಂಡಿರುವ ಪ್ರಮುಖ ಆರೋಪಿ ರಾಜುನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆಯ ವೇಳೆ ಸಿಕ್ಕಿಬಿದ್ದ ರಾಜು ಹೊರತಾಗಿ, ಸ್ಥಳದಲ್ಲಿದ್ದ ಉಳಿದ ಇಬ್ಬರು ಆರೋಪಿಗಳು ಕಾಡಿನ ದಾರಿಯಲ್ಲಿ ತಲೆಮರೆಸಿಕೊಂಡು ಪರಾರಿಯಾಗಿದ್ದಾರೆ. ಪ್ರಸ್ತುತ ಇಡೀ ಪ್ರದೇಶವನ್ನು ವಶಕ್ಕೆ ಪಡೆದಿರುವ ಪೊಲೀಸರು ಎಸ್ಕೇಪ್‌ ಆದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.



Related posts

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ

Mumbai News Desk

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 96% ಅಂಕ ಗಳಿಸಿ ಸಾಧನೆ ಮಾಡಿದ ಆಶ್ವಿ ಎಚ್. ಬಂಗೇರ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ

Mumbai News Desk