August 8, 2026
Mumbai News Kannada
ನಿಧನ ಸುದ್ದಿ

ಹೆಜಮಾಡಿ: ಆಶಾ ಕಾರ್ಯಕರ್ತೆ, ಧಾರ್ಮಿಕ ಮುಖಂಡೆ ಸರೋಜಿನಿ ಸಂಜೀವ ಮಾಸ್ಟರ್ ನಿಧನ





ಹೆಜಮಾಡಿ, ಆ. 8: ಹೆಜಮಾಡಿ ಕೋಡಿಯ ಶ್ರೀ ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದ ಅಧ್ಯಕ್ಷರು ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸಂಜೀವ ಮಾಸ್ಟರ್ ಅವರ ಧರ್ಮಪತ್ನಿ ಸರೋಜಿನಿ ಅವರು ಆಗಸ್ಟ್ 7ರಂದು, 60ನೇ ವಯಸ್ಸಿನಲ್ಲಿ ನಿಧನರಾದರು.

ಅವರು ಹೆಜಮಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುವ ಮೂಲಕ ಜನರ ಆರೋಗ್ಯ ಹಾಗೂ ಕಲ್ಯಾಣದ ವಿಚಾರಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ವೃತ್ತಿಜೀವನದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದ ಅವರು, ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿ ಸಮಾಜಮುಖಿ ಸೇವೆ ಸಲ್ಲಿಸಿದ್ದರು.

ವಿಶೇಷವಾಗಿ ಶ್ರೀ ಬ್ರಹ್ಮ ಮುಗ್ಗೆರ್ಕಳ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಸಮಾಜಮುಖಿ ಚಟುವಟಿಕೆಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದರು. ಅಲ್ಲದೆ ಬ್ರಹ್ಮ ಮುಗ್ಗೆರ್ಕಳ ಮಹಿಳಾ ಮಂಡಳಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಮಹಿಳೆಯರ ಸಂಘಟನೆ, ಸಾಮಾಜಿಕ ಚಟುವಟಿಕೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಸರಳತೆ, ಸೇವಾ ಮನೋಭಾವ ಹಾಗೂ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಸರೋಜಿನಿ ಅವರು, ತಮ್ಮ ಸುತ್ತಮುತ್ತಲಿನ ಜನರೊಂದಿಗೆ ಆತ್ಮೀಯವಾಗಿ ಬೆರೆತು, ಅಗತ್ಯವಿರುವವರಿಗೆ ನೆರವಾಗುತ್ತಿದ್ದ ಸಮಾಜಮುಖಿ ವ್ಯಕ್ತಿತ್ವದವರಾಗಿದ್ದರು. ಅವರ ನಿಧನದಿಂದ ಹೆಜಮಾಡಿ ಕೋಡಿ ಹಾಗೂ ಸುತ್ತಮುತ್ತಲಿನ ಸಮಾಜಕ್ಕೆ, ವಿವಿಧ ಸಂಘ-ಸಂಸ್ಥೆಗಳಿಗೆ ಹಾಗೂ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ.

ಅವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಹಾಗೂ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.



Related posts

ರಂಗಕರ್ಮಿ, ಸಾಹಿತಿ ಪರಮಾನಂದ ವಿ. ಸಾಲ್ಯಾನ್ ಇನ್ನಿಲ್ಲ: ಸಸಿಹಿತ್ಲುವಿನಲ್ಲಿ ಇಂದು ಅಂತಿಮ ದರ್ಶನ

Mumbai News Desk

ಸಂಗೀತ ಲೋಕದ ಮಹಾತಾರೆ ಅಸ್ತಂಗತ; ‘ಗಾನಕೋಗಿಲೆ’ ಎಸ್. ಜಾನಕಿ ಇನ್ನಿಲ್ಲ

Mumbai News Desk

ಖಾಸಗಿ ಹೋಟೆಲ್ ಉದ್ಯೋಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕಲ್ಮಾಡಿ ನಿವಾಸಿ ಕೃತಿ ಬಂಗೇರಾ ಆತ್ಮಹತ್ಯೆ

Mumbai News Desk

ವಸಾಯಿ: ನವೀನ್ ಪುತ್ರನ್ ನಿಧನ

Mumbai News Desk

ಜೋಗೇಶ್ವರಿ: ಹೋಟೆಲ್ ಉದ್ಯಮಿ, ಸಂಘಟಕ ನಾರಾಯಣ ಪೂಜಾರಿ ನಿಧನ

Mumbai News Desk