32 C
Mumbai
April 24, 2026
Mumbai News Kannada
ಕರಾವಳಿ

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.





ವೇಣೂರು ಸಮೀಪದ ಅಂಡೆಂಜ ಗ್ರಾಮದ ಮಂಜಿ ಬೆಟ್ಟು ಕೇಶವ ಬುನ್ನಾನ್ ಇವರ ನೇತ್ರತ್ವದಲ್ಲಿ, ಹಾಗೂ ಮುಂಬೈ ವಸಾಯಿ ಪರಿಸರದ ಕೊಡುಗೈ ದಾನಿಗಳು ಹಾಗೂ ಹೊಟೇಲ್ ಉದ್ಯಮಿಗಳಾದ ದೇವೇಂದ್ರ ಬುನ್ನಾನ್, ಹಾಗೂ ರಾಮ ಮಡಿವಾಳ ಇವರ ಮುಂದಾಳ್ತನದಲ್ಲಿ ಬುನ್ನಾನ್ ಕುಟುಂಬದ ದೈವದ ಕೋಲ(ನೇಮವು) ಬಹಳ ವಿಜೃಂಭಣೆಯಿಂದ, ಭಕ್ತಿಯಿಂದ ತಾರೀಕು 13/12/2023 ಬುಧವಾರ ರಾತ್ರಿ 8.30 ರಿಂದ ಜರುಗಿತು.


ಬಿರವು,ಬಾಬು ಬಳಗದರಿಂದ ಕೋಲ ಹಾಗೂ ದಿನೇಶ್ ಮೂಡಬಿದ್ರೆ ಬಳಗದವ ರಿಂದ ವಾಧ್ಯ ನಾದಸ್ವರ, ತುಳುನಾಡು ಹಾಗೂ ಮುಂಬೈಯ ಭೂತಾರಾಧನೆಯ ದಾರ್ಮಿಕ ಸಂಘಟಿಗ ಉಮೇಶ್ ಕಾಂತಾವರ ಇವರ ಮಧ್ಯಸ್ಥಿಕೆಯಲ್ಲಿ ನೆರವೇರಿತು. ಪ್ರಥಮವಾಗಿ, ಗ್ರಾಮದ ಪುರೋಹಿತರಿಂದ ಪೂಜಾ ವಿಧಾನಗಳು ನಡೆದ , ಆನಂತರ 5.30 ಕ್ಕೆ ಸಂಜೆ ಸರಿಯಾಗಿ ಬಂಡಾರ ಇಳಿಸಿವೇಕೆ ನಡೆಯಿತು. ಬಂದ ಭಕ್ತಾದಿಗಳು, ಹಾಗೂ ಗ್ರಾಮದ ನೆರೆಕರೆ ಹಾಗೂ ಕುಟುಂಬದ ಬಂಧು ಬಾಂಧವರಿಗೆ ಅನ್ನದಾನದ ಸೇವೆ ಹಾಗೂ ಚಾ,ಲಘು ಉಪಹಾರದ ವ್ಯವಸ್ಥೆ ಮಾಡಲಾಯಿತು .


ಸುಮಾರು 8 ದೈವಗಳ ನೇಮ ಸೇವೆ ರಾತ್ರಿ 8.30 ರಿಂದ ಮರುದಿನ ಮಧ್ಯಾಹ್ನ 2.30 ತನಕ ಬಹಳ ಅರ್ಥಪೂರ್ಣವಾಗಿ ಸುಮಾರು ಅಂದಾಜು 1000 ಜನ ಭಕ್ತಾಧಿಗಳ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಧಾರ್ಮಿಕ ದೈವಾರಾಧನೆ, ಕಾರ್ಯಕ್ರಮದಲ್ಲಿ ,ಕೇವಲ ಬುನ್ನಾನ್ ಪರಿವಾರ ಅಲ್ಲದೆ ಇತರ ಜಾತಿ, ಪರಜಾತಿ ಬಂದು ಭಾಂದವರು, ಊರು ಪರವೂರಿನವರು ಶ್ರದ್ಧೆ ಭಕ್ತಿ ಬಂದು , ಬುನ್ನಾನ್ ಕುಟುಂಬದ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡರು.



Related posts

ಶಿಲಾಮಯಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಣೆ : ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ

Mumbai News Desk

ಕೀರ್ತಿ ವಿ  ಮೂಲ್ಯ 95,83  ಅಂಕ

Mumbai News Desk

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk