ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಿನ ಜಾವ ಘಾಟ್ಕೋಪರ್-ಕುರ್ಲಾ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಬುಧವಾರ ಮುಂಜಾನೆ ಸುಮಾರು 3:00ರಿಂದ 3:48ರ ಅವಧಿಯಲ್ಲಿ ಕುರ್ಲಾದ ಚಿರಾಾಗ್ ನಗರ ಹಾಗೂ ಅಶೋಕನಗರ ಭಾಗದಲ್ಲಿ ಈ ದುರಂತ ಸಂಭವಿಸಿದೆ. ರಾತ್ರಿಯ ಕತ್ತಲು ಮತ್ತು ಧಾರಾಕಾರ ಮಳೆಯ ಕಾರಣ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸಾಧ್ಯವಾಗದೆ ಹಲವು ಮನೆಗಳು ಮಣ್ಣಿನಡಿಯಲ್ಲಿ ಸಿಲುಕಿ ಜಜ್ಜುಗೆೊಂಡಿವೆ.
ಘಟನಾ ಸ್ಥಳದಿಂದ ಇದುವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮಣ್ಣಿನ ಅಡಿಯಲ್ಲಿ ಇನ್ನು 6ರಿಂದ 8 ಜನರು ಸಿಲುಕಿಕೊಂಡಿದ್ದಾರೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ತಿಳಿಸಿದೆ. ಪ್ರಸ್ತುತ ಸ್ಥಳದಲ್ಲಿ ಎನ್ಡಿಆರ್ಎಫ್ (NDRF), ಮುಂಬೈ ಅಗ್ನಿಶಾಮಕ ದಳ, ಮುಂಬೈ ಪೊಲೀಸ್, ಸ್ಥಳೀಯ ಪಾಲಿಕೆ ಸಿಬ್ಬಂದಿ ಹಾಗೂ 108 ಆಂಬುಲೆನ್ಸ್ ತಂಡಗಳು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.




