29.9 C
Mumbai
August 12, 2026
Mumbai News Kannada
ಮುಂಬಯಿ

ಮುಂಬೈನಲ್ಲಿ ಸುರಿದ ಭಾರಿ ಮಳೆಗೆ ಕುರ್ಲಾ ಬಳಿ ಭೂಕುಸಿತ: ಇಬ್ಬರ ಸಾವು, 6ರಿಂದ 8 ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ





ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಿನ ಜಾವ ಘಾಟ್‌ಕೋಪರ್-ಕುರ್ಲಾ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಬುಧವಾರ ಮುಂಜಾನೆ ಸುಮಾರು 3:00ರಿಂದ 3:48ರ ಅವಧಿಯಲ್ಲಿ ಕುರ್ಲಾದ ಚಿರಾಾಗ್ ನಗರ ಹಾಗೂ ಅಶೋಕನಗರ ಭಾಗದಲ್ಲಿ ಈ ದುರಂತ ಸಂಭವಿಸಿದೆ. ರಾತ್ರಿಯ ಕತ್ತಲು ಮತ್ತು ಧಾರಾಕಾರ ಮಳೆಯ ಕಾರಣ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸಾಧ್ಯವಾಗದೆ ಹಲವು ಮನೆಗಳು ಮಣ್ಣಿನಡಿಯಲ್ಲಿ ಸಿಲುಕಿ ಜಜ್ಜುಗೆೊಂಡಿವೆ.
ಘಟನಾ ಸ್ಥಳದಿಂದ ಇದುವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮಣ್ಣಿನ ಅಡಿಯಲ್ಲಿ ಇನ್ನು 6ರಿಂದ 8 ಜನರು ಸಿಲುಕಿಕೊಂಡಿದ್ದಾರೆ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆ (BMC) ತಿಳಿಸಿದೆ. ಪ್ರಸ್ತುತ ಸ್ಥಳದಲ್ಲಿ ಎನ್‌ಡಿಆರ್‌ಎಫ್ (NDRF), ಮುಂಬೈ ಅಗ್ನಿಶಾಮಕ ದಳ, ಮುಂಬೈ ಪೊಲೀಸ್, ಸ್ಥಳೀಯ ಪಾಲಿಕೆ ಸಿಬ್ಬಂದಿ ಹಾಗೂ 108 ಆಂಬುಲೆನ್ಸ್ ತಂಡಗಳು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.



Related posts

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಗೋರೆಗಾಂವ್ ಪೂರ್ವ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ  59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ ಯಕ್ಷಗಾನ ಬಯಲಾಟ,

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ;ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಮುಂಬಯಿ: ಮಾಟುಂಗದ ಮೈಸೂರು ಅಸೋಸಿಯೇಷನ್‌ನಲ್ಲಿ ‘ಕನ್ನಡ ಕಂಪು ಸರಣಿ-10’ ಸಂಭ್ರಮ; ಸತೀಶ್ ಎನ್. ಬಂಗೇರ ಕುರಿತ ಕೃತಿ ಲೋಕಾರ್ಪಣೆ

Mumbai News Desk

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

Mumbai News Desk