August 14, 2026
Mumbai News Kannada
ಪ್ರಕಟಣೆ

ಬೋರಿವಲಿ ನ್ಯಾನ್ಸಿ ಕಾಂಫ್ಲೆಕ್ಸ್ ಶ್ರೀ ಜಗದೀಶ್ವರಿ ಮಂದಿರ: ಆ.17, ನಾಗಪಂಚಮಿಯಂದು ಆಶ್ಲೇಷ ಬಲಿ ಪೂಜೆ





ಬೋರಿವಲಿ ಪೂರ್ವದ ಸಂಜಯ ಗಾಂಧಿ ರಾಷ್ಟ್ರೀಯ ಉದ್ಯಾನದ ಸನಿಹದ ಶ್ರೀಕೃಷ್ಣ ನಗರದ ನ್ಯಾನ್ಸಿ ಕಾಂಫ್ಲೆಕ್ಸ್ (ನವನಿರ್ಮಿತವಾಗಿರುವ ಶೀತಲ್ ರಿಗಾಲಿಯಾ) ಇಲ್ಲಿಯ ಶ್ರೀ ಜಗದೀಶ್ವರಿ ಮಂದಿರದಲ್ಲಿ ಇದೇ ಸೋವವಾರ ದಿನಾಂಕ ಆ.17, ನಾಗಪಂಚಮಿಯಂದು ಬೆಳಿಗ್ಗೆ 6-00 ರಿಂದ 7-00ರ ತನಕ ಪಂಚಾಮೃತ ಮಹಾ ಅಭಿಷೇಕ, 7-00 ರಿಂದ 9-00ರ ತನಕ ಆಶ್ಲೇಷ ಬಲಿ ಮಹಾಪೂಜೆ ನಡೆಯಲಿದೆ.

ಕ್ಷೇತ್ರದ ಆಡಳಿತ ಮಂಡಳಿ ಇದರ ಸಂಕಲ್ಪದಂತೆ, ಮಂದಿರದಲ್ಲಿ ಹತ್ತು-ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಜರಗುತ್ತಲಿರುವುದು. ಅಂತೆಯೇ ಮಂದಿರದ ಪ್ರಧಾನ ಅರ್ಚಕರಾದ ವಿದ್ವಾನ್ ವಿಜಯ ಉಪಾಧ್ಯಾಯ ಇವರ ನೇತೃತ್ವದಲ್ಲಿ, ನಾಗಪಂಚಮಿಯಂದು ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿರುವುದು.
ಭಕ್ತಾದಿಗಳೆಲ್ಲರು ಸಕಾಲದಲ್ಲಿ ಆಗಮಿಸಿ, ಕಾರ್ಯಕ್ರಮಗಳಲ್ಲಿ ಸಹಭಾಗಿಗಳಾಗಿದ್ದು, ಶ್ರೀ ಜಗದೀಶ್ವರಿ ಮಾತೆಯ ಹಾಗೂ ನಾಗದೇವರ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗಬೇಕಾಗಿ ಆಡಳಿತ ಮಂಡಳಿ, ವಿಪ್ರವೃಂದ ಹಾಗೂ ಸರ್ವ ಸದಸ್ಯರು ವಿನಂತಿಸುತ್ತಿದ್ದಾರೆ.



Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆ. 10 ರಂದು ಕಾಂದಿವಲಿಯಲ್ಲಿ “ಆಟಿದ ನೆನೆಪು – ಸ್ಕಿಲ್ಲ್ ಫಾರ್ ಎಂಪ್ಲಾಯ್” ಜಂಟಿ ಕಾರ್ಯಕ್ರಮ.

Mumbai News Desk

ಅಗಸ್ಟ್ 10 : ಯಕ್ಷಾಭ್ಯುದಯ ಬಳಗ ಕೋರ್ಟ್ ನಾಕ, ಥಾಣೆ ಪಶ್ಚಿಮ : ‘ಭಕ್ತ ಚಂದ್ರಹಾಸ’ ಯಕ್ಷಗಾನ ಪ್ರದರ್ಶನ

Mumbai News Desk

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

Mumbai News Desk

ಮಾ.16: ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ವತಿಯಿಂದ ವಿಶ್ವಮಹಿಳಾ ದಿನಾಚರಣೆ, ಸಂಸ್ಥಾಪಕ ದಿನಾಚರಣೆ ಹಾಗೂ ಹಳದಿಕುಂಕುಮ ಕಾರ್ಯಕ್ರಮ.

Mumbai News Desk