August 15, 2026
Mumbai News Kannada
ಪ್ರಕಟಣೆ

ಜೋಗೇಶ್ವರಿಯ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರಪಂಚಮಿ ಮಹೋತ್ಸವ





ಮುಂಬೈನ ಜೋಗೇಶ್ವರಿ ಪೂರ್ವದ ಕೇವ್ಸ್ ರೋಡ್, ಕೃಷ್ಣ ನಗರ, ಗುಂಫಾ ಟೆಕ್ಡಿಯ ನಾರಾಯಣಗಿರಿ ಆಶ್ರಮದಲ್ಲಿರುವ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಶ್ರಾವಣ ಮಾಸ ಶುಕ್ಲಪಕ್ಷ ಪಂಚಮಿಯ ಪ್ರಯುಕ್ತ 17.08.2026ನೇ ಸೋಮವಾರದಂದು ಬೆಳಿಗ್ಗೆ 9:00 ರಿಂದ 12:00 ಗಂಟೆಯವರೆಗೆ ‘ನಾಗರಪಂಚಮಿ ಮಹೋತ್ಸವ’ವು ವೈಭವದಿಂದ ಜರುಗಲಿದೆ.

ಈ ಶುಭ ಸಂದರ್ಭದಲ್ಲಿ ಶ್ರೀ ನಾಗದೇವರಿಗೆ ಸಾಮೂಹಿಕ ಆಶ್ಲೇಷ ಬಲಿ, ನಾಗತನು, ನಾಗತಂಬಿಲ, 108 ಸೀಯಾಳ ಅಭಿಷೇಕ, ಹಾಲಿನ ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಮಹಾಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕರಾದ ಪಾಡೂರು ನರಹರಿ ತಂತ್ರಿ ಅವರ ಪೌರೋಹಿತ್ಯದಲ್ಲಿ ನೆರವೇರಲಿದೆ. ಪೂಜಾ ಕಾರ್ಯಕ್ರಮಗಳ ನಂತರ ಭಕ್ತಾದಿಗಳಿಗೆ ಸಾಮೂಹಿಕ ಅನ್ನ ಸಂತರ್ಪಣೆ ಸೇವೆ ನಡೆಯಲಿದೆ.

ಈ ಧಾರ್ಮಿಕ ಉತ್ಸವದಲ್ಲಿ ಆಡಳಿತ ಮೊಕ್ತೇಸರರಾದ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಗೌರವ ಕಾರ್ಯದರ್ಶಿ ದೇವದಾಸ್ ಎಸ್. ಸುವರ್ಣ, ಟ್ರಸ್ಟಿಗಳು, ಮಹಿಳಾ ಮಂಡಳ, ಸೇವಾ ಸಮಿತಿ ಹಾಗೂ ಸರ್ವ ಸದಸ್ಯರು ಮತ್ತು ಸಮಸ್ತ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಜಗದಂಬಾ ಪರಿವಾರ ದೇವತೆಗಳ ಸೇವೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಶ್ರೀ ನಾಗದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.



Related posts

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

ನ.17 ರಂದು ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವಾರ್ಷಿಕ ಕ್ರೀಡೋತ್ಸವ ದಂಗಲ್ 2024

Mumbai News Desk

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ

Mumbai News Desk

ಡಿ. 3 : ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ – ಸನ್ಮಾನ – ಯಕ್ಷಗಾನ-ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk