
ಮಾರ್ನಾಡು: ಇಲ್ಲಿನ ಪಡುಮಾರ್ನಾಡು ಯುವಕ ಮಂಡಲದ 2026-27ನೇ ಸಾಲಿನ ಅಧ್ಯಕ್ಷರಾಗಿ ತೀರ್ಥಂಗಡಿ ರಮೇಶ್ ಎಸ್. ಶೆಟ್ಟಿ ಹಾಗೂ ಪ್ರಜ್ಞಾ ಯುವತಿ ಮಂಡಲದ 2026-27ನೇ ಸಾಲಿನ ಅಧ್ಯಕ್ಷೆಯಾಗಿ ಅಮನೊಟ್ಟು ಸುನೀತಾ ಹೆಗ್ಡೆ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ರಮೇಶ್ ಎಸ್. ಶೆಟ್ಟಿಯವರು ಊರಿನ ಜನರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸುತ್ತಾ ಜನಸಾಮಾನ್ಯರಿಗೆ ಸದಾ ಲಭ್ಯವಿರುವ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾರ್ನಾಡು ಶಾಲೆಯ ಜೀರ್ಣೋದ್ಧಾರ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸಿರುವ ಇವರು, ಪ್ರಸ್ತುತ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಎಲ್ಲಾ ಸತ್ಕಾರ್ಯಗಳು ಸಾಂಗವಾಗಿ ನೆರವೇರಲಿ ಎಂದು ಐ-ಲೇಸಾದ ವಿ. ಶಾಂತಾರಾಮ ಶೆಟ್ಟಿ, ಸೂರಿ ಮಾರ್ನಾಡು, ದೀಪಕ್ ಶೆಟ್ಟಿ ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.




