August 18, 2026
Mumbai News Kannada
ಮುಂಬಯಿ

ಶ್ರೀ ರಜಕ ಸಂಘ ಡೊಂಬಿವಲಿ ವಲಯದ ವತಿಯಿಂದ ಸಂಭ್ರಮದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ





ಡೊಂಬಿವಲಿ: ಶ್ರೀ ರಜಕ ಸಂಘ ಡೊಂಬಿವಲಿ ಪ್ರಾದೇಶಿಕ ವಲಯದ ವತಿಯಿಂದ ತುಳು ಸಂಸ್ಕೃತಿಯ ಒಂದು ಭಾಗವಾದ ಆಟಿ ತಿಂಗಳ ವಿಶೇಷತೆಯನ್ನು ಸಾರುವ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವು ದಿನಾಂಕ 16-08-2026ರ ಭಾನುವಾರದಂದು ಡೊಂಬಿವಲಿ ವಲಯದ ಕಚೇರಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ವಲಯದ ಸದಸ್ಯರಿಂದ ಶ್ರದ್ಧಾ-ಭಕ್ತಿಯ ಭಜನೆ ನಡೆಯಿತು. ವೇದಿಕೆಯಲ್ಲಿ ವಲಯದ ಅಧ್ಯಕ್ಷರಾದ ಶ್ರೀ ಜಯರಾಜ್ ಆರ್. ಬಂಗೇರ, ಉಪಾಧ್ಯಕ್ಷರಾದ ಶ್ರೀ ಬಿ. ಕೆ. ಜಗನ್ನಾಥ್, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಗೀತಾ ಆರ್. ಕುಂದರ್, ಯುವ ರಜಕದ ಅಧ್ಯಕ್ಷರಾದ ಶ್ರೀ ಶ್ರೀಜಿತ್ ಕುಂದರ್, ಸಂಯೋಜಕರು ಹಾಗೂ ಹಿರಿಯ ಮಾರ್ಗದರ್ಶಕರಾದ ಶ್ರೀ ಬಿ. ಎಂ. ಸಾಲ್ಯಾನ್ ಮತ್ತು ಶ್ರೀ ಬಿ. ಡಿ. ಸಾಲ್ಯಾನ್ ಉಪಸ್ಥಿತರಿದ್ದರು.

ಬಳಿಕ ಸಂಘದ ಏಳಿಗೆಗಾಗಿ ಶ್ರಮಿಸಿ ದಿವಂಗತರಾದ ಹಿರಿಯ-ಕಿರಿಯ ಸದಸ್ಯರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ವಲಯದ ಕಾರ್ಯಕಾರಿ ಸಮಿತಿಯ ಸದಸ್ಯೆ ಶ್ರೀಮತಿ ಜಯಶ್ರೀ ಪಿ. ಕುಂದರ್ ಅವರು ತುಳುನಾಡಿನ ಆಟಿ ತಿಂಗಳ ಮಹತ್ವ, ಅಂದಿನ ಕಷ್ಟದ ದಿನಗಳ ಜೀವನಶೈಲಿ, ಆಟಿ ಅಮಾವಾಸ್ಯೆಯಂದು ಹಾಲೆ ಮರದ ಕೆತ್ತೆಯ ಕಷಾಯ ಸೇವನೆಯ ಮಹತ್ವ, ಆಟಿ ಕಳೆಂಜನ ಹಿನ್ನೆಲೆ ಹಾಗೂ ಆಟಿ ತಿಂಗಳ ಸಾಂಪ್ರದಾಯಿಕ ಆಚರಣೆಗಳ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.

ಸಂಯೋಜಕರು ಹಾಗೂ ಹಿರಿಯ ಸದಸ್ಯರಾದ ಶ್ರೀ ಬಿ. ಎಂ. ಸಾಲ್ಯಾನ್ ಮಾತನಾಡಿ, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘದ ಏಳಿಗೆಗಾಗಿ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಆಶಿಸಿದರು. ಮತ್ತೊಬ್ಬ ಹಿರಿಯ ಸದಸ್ಯರಾದ ಶ್ರೀ ಬಿ. ಡಿ. ಸಾಲ್ಯಾನ್ ಅವರು ಮಹಿಳಾ ಸದಸ್ಯರ ಒಗ್ಗಟ್ಟನ್ನು ಶ್ಲಾಘಿಸಿ, ಯುವ ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಜಯರಾಜ್ ಆರ್. ಬಂಗೇರ ಅವರು ಮಾತನಾಡಿ, ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಮಹಿಳಾ ಕಾರ್ಯಕಾರಿ ಸಮಿತಿಯನ್ನು ಅಭಿನಂದಿಸಿದರು. ಜತೆಗೆ ವಲಯದ ಮುಂದಿನ ಯೋಜನೆಗಳನ್ನು ವಿವರಿಸಿ ಎಲ್ಲರ ಸಹಕಾರ ಕೋರಿದರು.

ನಂತರ ಸದಸ್ಯರಿಂದ ಹಾಡು, ಒಗಟುಗಳು ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ವಲಯದ ಕಾರ್ಯದರ್ಶಿ ಶ್ರೀ ನಿತೀಶ್ ಸಾಲ್ಯಾನ್, ಯುವ ರಜಕದ ಉಪಾಧ್ಯಕ್ಷ ಶ್ರೀ ಸಾಹಿಲ್ ಹೆಚ್. ಮಡಿವಾಳ ಹಾಗೂ ಕಾರ್ಯದರ್ಶಿ ಕುಮಾರಿ ಲಾಸ್ಯ ಜೆ. ಬಂಗೇರ ಅವರು ಸದಸ್ಯರಿಗಾಗಿ ಆಕರ್ಷಕ ಆಟಗಳನ್ನು (ಫನ್ ಗೇಮ್ಸ್) ನಡೆಸಿ ಗಮನ ಸೆಳೆದರು.

ಮಹಿಳಾ ಕಾರ್ಯಕಾರಿ ಸಮಿತಿಯ ಆಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವು ಯುವ ರಜಕ ಹಾಗೂ ಸಮಸ್ತ ಸದಸ್ಯರ ಸಹಕಾರದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮಹಿಳಾ ಉಪಾಧ್ಯಕ್ಷೆ ಶ್ರೀಮತಿ ಉಷಾ ಎನ್. ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದ ಕೊನೆಯಲ್ಲಿ ಸದಸ್ಯರು ಮನೆಯಲ್ಲೇ ಪ್ರೀತಿಯಿಂದ ತಯಾರಿಸಿ ತಂದಿದ್ದ ಆಟಿ ತಿಂಗಳ ಬಗೆಬಗೆಯ ಸಾಂಪ್ರದಾಯಿಕ ಹಾಗೂ ರುಚಿಕರ ಖಾದ್ಯಗಳ ರಸದೌತಣವನ್ನು ಎಲ್ಲರೂ ಸವಿದರು.



Related posts

ಬಂಟರ ಸಂಘ, ಮುಂಬಯಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಸ್ನೇಹ ಸಮ್ಮಿಲನ ಕಾರ್ಯಕ್ರಮ

Mumbai News Desk

ಕುಲಾಲ ಸಂಘದ ಮುಂಬಯಿಯ ನವಿ ಮುಂಬಯಿ ಸ್ಥಳೀಯ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ , ಭಜನೆ 

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.

Mumbai News Desk

“ಕನ್ನಡಿಗರ ಜ್ಞಾನ ವಿಕಾಸ ಮಂಡಲ ಮೆಹತಾ ಮಹಾವಿದ್ಯಾಲಯ ಐರೋಲಿ: 78ನೇ ಸ್ವಾತಂತ್ರೋತ್ಸವ ಸಂಭ್ರಮದ ಆಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.

Mumbai News Desk

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk