30 C
Mumbai
August 23, 2026
Mumbai News Kannada
ಸುದ್ದಿ

*ಭಾರತ್ ಬ್ಯಾಂಕ್ ಬೋಯಿಸರ್ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನ ಆಚರಣೆ





ಮುಂಬಯಿಯ ಪ್ರಮುಖ ಸಹಕಾರಿ ಬ್ಯಾಂಕ್ ಆಗಿರುವ ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿ. ಇದರ ಬೋಯಿಸರ್ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಶ್ರೀಮತಿ ಜೆನಿಫರ್ ಸಿಕ್ವೇರಾ (ಮ್ಯಾನೇಜರ್) ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

ಕಾರ್ಯಕ್ರಮದಲ್ಲಿ ಉಪ ಶಾಖಾ ಮುಖ್ಯಸ್ಥರಾದ ಶ್ರೀ ದಿನೇಶ್ ಎಸ್. ಪೂಜಾರಿ, ಸಿಬ್ಬಂದಿಗಳಾದ ಸಮೀಕ್ಷಾ ರಾವತ್, ಆಸಾವರಿ ಗುಪ್ತಾ, ಸಿದ್ಧೇಶ್ ಪೆಡ್ನೇಕರ್, ವಿನಲ್ ಅಯ್ಯರ್ ಅವರು ಉಪಸ್ಥಿತರಿದ್ದರು.

ಪ್ರಮುಖ ಗ್ರಾಹಕರಾದ ಶ್ರೀನಿವಾಸ ಕೋಟ್ಯಾನ್, ಪೂರ್ಣೇಶ್ ಪಾಲಿವಾಲ್, ಶ್ರೀಮತಿ ಸಾಧನಾ ಪಾಲಿವಾಲ್, ಪ್ರಕಾಶ್ ಶೆಟ್ಟಿ ಮತ್ತು ಯೋಗೇಶ್ ಶೆಟ್ಟಿ ಅವರು ಈ ಆಚರಣೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಬ್ಯಾಂಕ್ 1978 ರಲ್ಲಿ ಸ್ಥಾಪನೆಯಾಗಿ ಕಳೆದ 48 ವರ್ಷಗಳಿಂದ ಗ್ರಾಹಕರಿಗೆ ವಿಶ್ವಾಸಾರ್ಹ ಸೇವೆ ನೀಡುತ್ತಾ ಬಂದಿದೆ. ಗ್ರಾಹಕರ ವಿಶ್ವಾಸವೇ ನಮ್ಮ ಬಂಡವಾಳ ಎಂದು ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕಿ ಜೆನಿಫರ್ ಸಿಕ್ವೇರಾ ಅವರು ತಿಳಿಸಿದರು. ಗ್ರಾಹಕರಿಗೆ ಸಿಹಿ ಹಂಚಿ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಖೆಯ ಎಲ್ಲಾ ಗ್ರಾಹಕರಿಗೆ ಮತ್ತು ಹಿತೈಷಿಗಳಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.



Related posts

ಗೋವಾ ಮಂಗೇಶಿ ಕ್ಷೇತ್ರದಲ್ಲಿ ಸಾರಸ್ವತ ವೈದಿಕ ಸಮಾವೇಶ.

Mumbai News Desk

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ

Mumbai News Desk

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ

Mumbai News Desk

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk