ಹಳೆಯಂಗಡಿ: ತೋಕೂರು ಮದ್ದೇರಿ ದೈವಸ್ಥಾನದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ಆ 30 ರಂದು ಪೂರ್ವಾಹ್ನ ಗಂಟೆ 10ಕ್ಕೆ ಸರಿಯಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಮದ್ದೇರಿ ದೈವಸಾನದ ಅಧ್ಯಕ್ಷರಾದ ಪದ್ಮನಾಭ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರಾಗಿ ತೋಕೂರು ಗುತ್ತು ಹೊಸಮನೆ ಹರಿಪ್ರಸಾದ್ ಜಿ. ಶೆಟ್ಟಿ,
ಗೌ.ಅಧ್ಯಕ್ಷರಾಗಿ ಪದ್ಮನಾಭ ಆಚಾರ್ಯ ,
ಉಪಾಧ್ಯಕ್ಷರಾಗಿ ಹೇಮನಾಥ ಅಮೀನ್ , ಮೋಹನ್ ದಾಸ್, ಕಾರ್ಯದರ್ಶಿಯಾಗಿ ಸಂತೋಷ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಶೆಟ್ಟಿ, . ಕೋಶಾಧಿಕಾರಿಯಾಗಿ ಪುರುಷೋತ್ತಮ ಕೋಟ್ಯಾನ್, ಜೊತೆ ಕೋಶಾಧಿಕಾರಿಯಾಗಿ ಜಗದೀಶ್ ಕುಲಾಲ್ ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ಗುರುರಾಜ್ ಎಸ್. ಪೂಜಾರಿ, ಪ್ರಭಾಕರ್ ರಾವ್ ಕಂಬಳ ಬೆಟ್ಟು, ಪುರುಷೋತ್ತಮ ಶೆಟ್ಟಿಮೂಡುಮನೆ ,ಸಂಪತ್ ಜೆ.ಶೆಟ್ಟಿ ತೋಕೂರು ಗುತ್ತು ಇವರುಗಳನ್ನು ಆಯ್ಕೆ ಮಾಡಲಾಯಿತು . ಇದೇ ಸಂದರ್ಭದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನೂ ರಚಿಸಲಾಯಿತು.
ಸಭೆಯಲ್ಲಿ ಪದ್ಮನಾಭ ಆಚಾರ್ಯ ಸ್ವಾಗತಿಸಿದರು. ಪುರುಷೋತ್ತಮ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು. ಹೇಮನಾಥ ಅಮೀನ್ ವಂದಿಸಿದರು ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು
previous post




