September 6, 2026
Mumbai News Kannada
ಸುದ್ದಿ

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.





ಮುಂಬಯಿಯ ಪ್ರಸಿದ್ಧ ಭಜನಾ ಮಂಡಳಿಗಳಲ್ಲಿ ಒಂದಾಗಿರುವ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮರಿ ಇದರ ಸದಸ್ಯರು ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಹರಿನಾಮ ಸಂಕೀರ್ತನೆ ಭಜನೆ ಕಾರ್ಯಕ್ರಮ ವನ್ನು ನಡೆಸಿ ಕೊಟ್ಟರು.

ಡಿಸೆಂಬರ್ 17 ರಿಂದ 21 ರ ವರಗೆ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡ್ಕೂರು, ಶ್ರೀ ಕ್ಷೇತ್ರ ಕೊಡ್ಯಡ್ಕ, ಶ್ರೀ ಮಹಾ ವಿಷ್ಣು ಮಂದಿರ ಪುತ್ತೂರು, ಶ್ರೀ ಕ್ಷೇತ್ರ ಹನುಮಗಿರಿ, ಶ್ರೀ ಕ್ಷೇತ್ರ ಕಬತಾರ್, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲ, ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು, ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಕ್ಷೇತ್ರ ಅಂಬಲ್ಪಾಡಿ, ಶ್ರೀ ವಿಷ್ಣು ದೇವಸ್ಥಾನ ಶಕ್ತಿ ನಗರ ಮಂಗಳೂರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಭಗವತಿ ದೇವಸ್ಥಾನ ಸಶಿಹಿತ್ಲು, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮಣಿಲ, ಮುಂತಾದ ಕ್ಷೇತ್ರಗಳಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ಎಲ್ಲಾ ಕ್ಷೇತ್ರಗಳ ಆಡಳಿತ ಮುಕ್ತೆಸರು, ಅರ್ಚಕರು ಹಾಗೂ ಪದಾಧಿಕಾರಿಗಳು ಮಂಡಳಿಯನ್ನು ಸ್ವಾಗತಿಸಿ ಸತ್ಕರಿಸಿದರು.

ಉಮಾ ಮಹೇಶ್ವರಿ ಮಂದಿರದ ಆಡಳಿತ ಮೊಕ್ತೇಸರರಾದ ಶ್ರೀಮತಿ ಬಿ. ಕೆ. ಲಲಿತಾ ಶೀನ, ಹಿರಿಯರಾದ ಬಿ. ಎನ್. ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಿ ಕೊಟ್ಟ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡವನ್ನು ಅಭಿನಂದಿಸಿದರು.



Related posts

ಆಗಸ್ಟ್ 1 ರಿಂದ ಬದಲಾಗಲಿವೆ ಹಲವು ನಿಯಮಗಳು: ನಿಮ್ಮ ಜೇಬಿನ ಮೇಲೇನು ಪರಿಣಾಮ? ಇಲ್ಲಿದೆ ಸಮಗ್ರ ವರದಿ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ನಿಟ್ಟೆ ವಿಶ್ವವಿದ್ಯಾಲಯದ   ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ  ಆಯ್ಕೆ

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk