32.3 C
Mumbai
June 7, 2026
Mumbai News Kannada
ಸುದ್ದಿ

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.





ಮುಂಬಯಿಯ ಪ್ರಸಿದ್ಧ ಭಜನಾ ಮಂಡಳಿಗಳಲ್ಲಿ ಒಂದಾಗಿರುವ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮರಿ ಇದರ ಸದಸ್ಯರು ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಹರಿನಾಮ ಸಂಕೀರ್ತನೆ ಭಜನೆ ಕಾರ್ಯಕ್ರಮ ವನ್ನು ನಡೆಸಿ ಕೊಟ್ಟರು.

ಡಿಸೆಂಬರ್ 17 ರಿಂದ 21 ರ ವರಗೆ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡ್ಕೂರು, ಶ್ರೀ ಕ್ಷೇತ್ರ ಕೊಡ್ಯಡ್ಕ, ಶ್ರೀ ಮಹಾ ವಿಷ್ಣು ಮಂದಿರ ಪುತ್ತೂರು, ಶ್ರೀ ಕ್ಷೇತ್ರ ಹನುಮಗಿರಿ, ಶ್ರೀ ಕ್ಷೇತ್ರ ಕಬತಾರ್, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲ, ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು, ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಕ್ಷೇತ್ರ ಅಂಬಲ್ಪಾಡಿ, ಶ್ರೀ ವಿಷ್ಣು ದೇವಸ್ಥಾನ ಶಕ್ತಿ ನಗರ ಮಂಗಳೂರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಭಗವತಿ ದೇವಸ್ಥಾನ ಸಶಿಹಿತ್ಲು, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮಣಿಲ, ಮುಂತಾದ ಕ್ಷೇತ್ರಗಳಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ಎಲ್ಲಾ ಕ್ಷೇತ್ರಗಳ ಆಡಳಿತ ಮುಕ್ತೆಸರು, ಅರ್ಚಕರು ಹಾಗೂ ಪದಾಧಿಕಾರಿಗಳು ಮಂಡಳಿಯನ್ನು ಸ್ವಾಗತಿಸಿ ಸತ್ಕರಿಸಿದರು.

ಉಮಾ ಮಹೇಶ್ವರಿ ಮಂದಿರದ ಆಡಳಿತ ಮೊಕ್ತೇಸರರಾದ ಶ್ರೀಮತಿ ಬಿ. ಕೆ. ಲಲಿತಾ ಶೀನ, ಹಿರಿಯರಾದ ಬಿ. ಎನ್. ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಿ ಕೊಟ್ಟ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡವನ್ನು ಅಭಿನಂದಿಸಿದರು.



Related posts

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk