32 C
Mumbai
April 24, 2026
Mumbai News Kannada
ಸುದ್ದಿ

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.





ಮುಂಬಯಿಯ ಪ್ರಸಿದ್ಧ ಭಜನಾ ಮಂಡಳಿಗಳಲ್ಲಿ ಒಂದಾಗಿರುವ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಜರಿಮರಿ ಇದರ ಸದಸ್ಯರು ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಹರಿನಾಮ ಸಂಕೀರ್ತನೆ ಭಜನೆ ಕಾರ್ಯಕ್ರಮ ವನ್ನು ನಡೆಸಿ ಕೊಟ್ಟರು.

ಡಿಸೆಂಬರ್ 17 ರಿಂದ 21 ರ ವರಗೆ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡ್ಕೂರು, ಶ್ರೀ ಕ್ಷೇತ್ರ ಕೊಡ್ಯಡ್ಕ, ಶ್ರೀ ಮಹಾ ವಿಷ್ಣು ಮಂದಿರ ಪುತ್ತೂರು, ಶ್ರೀ ಕ್ಷೇತ್ರ ಹನುಮಗಿರಿ, ಶ್ರೀ ಕ್ಷೇತ್ರ ಕಬತಾರ್, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲ, ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು, ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಕ್ಷೇತ್ರ ಅಂಬಲ್ಪಾಡಿ, ಶ್ರೀ ವಿಷ್ಣು ದೇವಸ್ಥಾನ ಶಕ್ತಿ ನಗರ ಮಂಗಳೂರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಭಗವತಿ ದೇವಸ್ಥಾನ ಸಶಿಹಿತ್ಲು, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮಣಿಲ, ಮುಂತಾದ ಕ್ಷೇತ್ರಗಳಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ಎಲ್ಲಾ ಕ್ಷೇತ್ರಗಳ ಆಡಳಿತ ಮುಕ್ತೆಸರು, ಅರ್ಚಕರು ಹಾಗೂ ಪದಾಧಿಕಾರಿಗಳು ಮಂಡಳಿಯನ್ನು ಸ್ವಾಗತಿಸಿ ಸತ್ಕರಿಸಿದರು.

ಉಮಾ ಮಹೇಶ್ವರಿ ಮಂದಿರದ ಆಡಳಿತ ಮೊಕ್ತೇಸರರಾದ ಶ್ರೀಮತಿ ಬಿ. ಕೆ. ಲಲಿತಾ ಶೀನ, ಹಿರಿಯರಾದ ಬಿ. ಎನ್. ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಿ ಕೊಟ್ಟ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡವನ್ನು ಅಭಿನಂದಿಸಿದರು.



Related posts

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಶ್ರಾವಣಿ ರಾಜೇಶ್ ಕೋಟ್ಯಾನ್ ಗೆ ಶೇ 94.50 ಅಂಕ.

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk