30.5 C
Mumbai
June 8, 2026
Mumbai News Kannada
ಮುಂಬಯಿ

ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ





ಶ್ರೀ ಉದ್ಭವ ದುರ್ಗಾಪರಮೇಶ್ವರಿ ಮಂದಿರ, ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ಅಯ್ಯಪ್ಪ ಸ್ವಾಮಿಯ ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ

ಚೆಂಬೂರು ಆಶೀಶ್ ಥೀಯೇಟರ್ ಸಮೀಪದ ಶಬರಿ ಶಾನ್ ಟವರ್ ನ ಬದಿಯಲ್ಲಿರುವ ಶ್ರೀ ಉದ್ಭವ ದುರ್ಗಾಪರಮೇಶ್ವರಿ ಮಂದಿರದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ವಾರ್ಷಿಕ ಪಡಿಪೂಜೆ, ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಡಿಸೆಂಬರ್ 25 ಸೋಮವಾರದಂದು ಶ್ರೀ ರಾಜು ದೇವಾಡಿಗ ಗುರುಸ್ವಾಮಿ ತ್ರಾಸಿ ಇವರ ಮಾರ್ಗದರ್ಶನದಲ್ಲಿ ಶಿಬಿರದ ಉದಯ ದೇವಾಡಿಗ ಗುರುಸ್ವಾಮಿ, ರಾಘವೇಂದ್ರ ದೇವಾಡಿಗ ಗುರುಸ್ವಾಮಿ ಮತ್ತು ಶ್ರೀಮತಿ ತುಂಗಾ ಕೆ. ದೇವಾಡಿಗರವರ ಮುಂದಾಳತ್ವದಲ್ಲಿ ಜರಗಿತು.

ಅಂದು ಬೆಳಿಗ್ಗೆ ಮಂದಿರದ ಭಜನಾ ಮಂಡಳಿಯವರಿಂದ ಭಜನೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನವಿಮುಂಬಯಿ ಇವರಿಂದ ಭಜನೆ, ಉದ್ಭವ ದುರ್ಗಾಪರಮೇಶ್ವರಿ ಮಂದಿರದ ಮಹಾ ಆರತಿ, ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ, ಮಹಾಪೂಜೆ ತದನಂತರ ತೀರ್ಥಪ್ರಸಾದ ವಿತರಣೆಗೊಂಡು, ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಅನ್ನಪ್ರಸಾದವನ್ನು ಸ್ವೀಕರಿಸಿದರು.



Related posts

ಜೀರ್ಣೋದ್ಧಾರಗೊಂಡ ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕುಂಭಾಭಿಷೇಕ.

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk

ವರ್ಲಿ ಶ್ರೀ ಅಪ್ಪಾಜಿ ಬೀಡು ಫೌಂಡೇಶನ್: ರಮೇಶ್ ಗುರುಸ್ವಾಮಿ ಗೆ ನುಡಿ ನಮನ.

Mumbai News Desk

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಕಲಂಬೋಲಿ, ಆಟಿಡೋಂಜಿ ದಿನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಕಚೇರಿ – 170ನೇ ಗುರು ಜಯಂತಿ ಆಚರಣೆ.

Mumbai News Desk