30 C
Mumbai
April 24, 2026
Mumbai News Kannada
ಪ್ರಕಟಣೆ

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ





ಶ್ರೀ ಅಯ್ಯಪ್ಪ ಸ್ವಾಮಿಗಾಗಿ ಜೀವನವನ್ನೇ ಮುಡಿಪಾಗಿಟ್ಟಿರುವ, ಸಮಾಜದ ಬಡ ಕುಟುಂಬಗಳಿಗೆ ಹಾಗೂ ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು, ಶಾಲಾ ವಿದ್ಯಾರ್ಥಿಗಳಿಗೆ, ಸಂಘ – ಸಂಸ್ಥೆಗಳಿಗೆ ನೀಡುತ್ತಾ ಕಳೆದ 38 ವರ್ಷಗಳಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಕಟ್ಟುನಿಟ್ಟಿನ ವೃತಾಚರಣೆಯನ್ನು ಮಾಡಿ ಧರ್ಮನಿಷ್ಠೆಯಿಂದ ಶಬರಿಮಲೆಗೆ ಯಾತ್ರೆಯನ್ನು ಕೈಗೊಳ್ಳುತ್ತಾ ಅದರಲ್ಲಿಯೂ, ಏಳು ವರುಷ ಮುಂಬಯಿಯಿಂದ ಪಾದಯಾತ್ರೆಯ ಮೂಲಕ ಕಲಿಯುಗ ವರದ ಶ್ರೀ ಅಯ್ಯಪ್ಪನ ದರ್ಶನ ಮಾಡಿರುವ, ಸುಮಾರು 18 ವರ್ಷಗಳಿಂದ ತನ್ನ ಕಾಲಿಗೆ ಚಪ್ಪಲಿಯನ್ನು ಹಾಕದೆ ಎಲ್ಲಾ ಊರುಗಳನ್ನು ಸಂಚರಿಸುತ್ತಿರುವ ಮತ್ತು ಅಯ್ಯಪ್ಪ ಸ್ವಾಮಿಯಂತೆ ಬ್ರಹ್ಮಚಾರಿಯಾಗಿರುವ, ತನ್ನ 60ನೇ ವರ್ಷದ ಪ್ರಾಯದಲ್ಲಿಯೂ 1800 ಕಿಲೋಮೀಟರ್ ಪಾದಯಾತ್ರೆಯನ್ನು ಮಾಡಿರುವ ಹಾಗೂ ಊರಿನಲ್ಲಿಯೂ ಹಾಗೂ ಮುಂಬಯಿಯಲ್ಲಿಯೂ ಗುರುಸ್ವಾಮಿ ಎಂದೇ ಪ್ರಸಿದ್ಧಿ ಪಡೆದಿರುವ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ
ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ ಜನವರಿ 6 ರ ಶನಿವಾರ ಜರುಗಲಿದೆ.

ಆ ಪ್ರಯುಕ್ತ ತಾ. 05-01-2024ನೇ ಶುಕ್ರವಾರ
ಸಂಜೆ ಘಂಟೆ 5.00ಕ್ಕೆ ಅಯ್ಯಪ್ಪ ಶಿಬಿರದಿಂದ ಹೊರ ಕಾಣಿಕೆ ಹೊರಡುವುದು.
ತಾ. 06-01-2024ನೇ ಶನಿವಾರ ಬೆಳಗ್ಗೆ ಘಂಟೆ 6.00ಕ್ಕೆ ಗಣಹೋಮ ಬೆಳಗ್ಗೆ ಘಂಟೆ 11.00ಕ್ತ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಹಾಪೂಜೆ ಮಧ್ಯಾಹ್ನ ಗಂಟೆ 12.30ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 6.00ಕ್ಕೆ ವಿಶೇಷ ಹೂವಿನ ಪೂಜೆ ತದನಂತರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ವಿಶೇಷ ಮೆರವಣಿಗೆ ಅಯ್ಯಪ್ಪ ಶಿಬಿರದ ವರೆಗೆ, ರಾತ್ರಿ ಗಂಟೆ 8.00ಕ್ಕೆ ಚಂದ್ರಹಾಸ ಗುರುಸ್ವಾಮಿ ನೇತೃತ್ವದಲ್ಲಿ ಶಿಬಿರದಲ್ಲಿ ಪಡಿಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿರುವುದು.


ತಾ. 09-01-2024ನೇ ಮಂಗಳವಾರ ಬೆಳಿಗ್ಗೆ ಗಂಟೆ 8.00ರಿಂದ ಇರುಮುಡಿ ಕಟ್ಟುವುದು.

ಈ ಎಲ್ಲಾ ಕಾರ್ಯಕ್ರಮಗಳಿಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ಅಯ್ಯಪ್ಪ ಸ್ವಾಮಿ ದೇವರ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಚಂದ್ರಹಾಸ ಗುರುಸ್ವಾಮಿ ಹಾಗೂ ಶಿಷ್ಯಂದಿರು, ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಹಾಗೂ ಮುಂಬಯಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.

.

.

.



Related posts

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಫೆಬ್ರವರಿ 12ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk