30.5 C
Mumbai
June 8, 2026
Mumbai News Kannada
ಪ್ರಕಟಣೆ

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.






ಶ್ರೀ ಅಯ್ಯಪ್ಪ ಭಕ್ತ ವೃಂದ ,ಸಾಮಾಜಿಕ ಸಂಸ್ಥೆ ನಾಲಾಸೋಪರ ದ ವತಿಯಿಂದ ವಾರ್ಷಿಕ ಅಯ್ಯಪ್ಪ ಮಹಾಪೂಜೆಯು ಜನವರಿ 7ರ ಆದಿತ್ಯವಾರ ,ನಾಲಾಸೋಪರ ಪೂರ್ವ ಅಚೋಲೇ ರೋಡ್ ,ದ್ವಾರಕ ಹೋಟೆಲ್ ಸಮೀಪ ಮಜೀತಿಯ ನಾಕದಲ್ಲಿ ಗುರುಸ್ವಾಮಿ ಪದ್ಮನಾಭ ಪೂಜಾರಿ ಅವರ ದಿವ್ಯ ಹಸ್ತದಿಂದ ನಡೆಯಲಿದೆ.
ಅಂದು ಬೆಳ್ಳಿಗ್ಗೆ 5 ಗಂಟೆಗೆ ಶರಣು ಘೋಷ, 6 ರಿಂದ 7 ರ ತನಕ ಪುರೋಹಿತ ಧನಂಜಯ ಶಾಂತಿ ಅವರಿಂದ ಗಣಹೋಮ, 7ರಿಂದ 9ರ ವರೆಗೆ ಸಹಸ್ರ ನಾಮವಳಿ, 9 ರಿಂದ 12 – ಶ್ರೀ ಅಯ್ಯಪ್ಪ ಭಜನಾ ಮಂಡಳಿ ಮತ್ತು ಶ್ರೀ ಗುರು ನಾರಾಯಣ ಭಜನಾ ಮಂಡಳಿ ,ನಾಲಾಸೋಪರ ,ಇವರಿಂದ ಭಜನೆ, ಮಧ್ಯಾಹ್ನ 12 ಕ್ಕೆ ಪಡಿ ಪೂಜೆ, 12.30ರಿಂದ ಮಹಾ ಆರತಿ, 1 ರಿಂದ 4ರ ವರೆಗೆ ಅನ್ನ ಸಂತರ್ಪಣೆ , ಸಂಜೆ 7 ಗಂಟೆಗೆ ಕನ್ನಿ ಸ್ವಾಮಿಯವರ ಇರುಮುಡಿ ಕಾರ್ಯಕ್ರಮ ನಡೆಯಲಿದೆ.
ವಾರ್ಷಿಕ ಮಹಾಪೂಜೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಪ್ರಸಾದ ಸ್ವೀಕರಿಸುವಂತ್ತೆ, ಸಂಸ್ಥೆಯ ಗೌರವ ಅಧ್ಯಕ್ಷ ಜಗನ್ನಾಥ ಎನ್ ರೈ, ಅಧ್ಯಕ್ಷ ಗುರುಸ್ವಾಮಿ ಸದಾಶಿವ ಎ ಕರ್ಕೇರ, ಗುರುಸ್ವಾಮಿ ಪದ್ಮನಾಭ ಪೂಜಾರಿ, ಗೌರವ ಕಾರ್ಯದರ್ಶಿ ಸದಾನಂದ ಆರ್ ಸಾಲ್ಯಾನ್, ಗೌರವ ಕೋಶಾಧಿಕಾರಿ ಹರೀಶ್ ಪೂಜಾರಿ, ಜತೆ ಕಾರ್ಯದರ್ಶಿ ಪ್ರಸನ್ನ ಜೆ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ದೇವಕಿ ಎಸ್ ಕರ್ಕೇರ, ಉಪ ಕಾರ್ಯಧ್ಯಕ್ಷೆಯರುಗಳಾದ ಪುಷ್ಪ ಎಸ್ ಕೋಟ್ಯಾನ್, ಪಾವನ ವಿ ಶೆಟ್ಟಿ, ಕಾರ್ಯದರ್ಶಿ ಹರಿನಾಕ್ಷಿ ಪೂಜಾರಿ, ಜತೆ ಕಾರ್ಯದರ್ಶಿ ಶುಭತಿಲಕ ಸುವರ್ಣ, ಸಮಿತಿಯ ಸ್ವಾಮಿಗಳು, ಆಡಳಿತ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸರ್ವ ಸದಸ್ಯರು ವಿನಂತಿಸಿದ್ದಾರೆ.

.

.

.

.

.

.

.

.



Related posts

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ

Mumbai News Desk