28.4 C
Mumbai
March 7, 2026
Mumbai News Kannada
ಸುದ್ದಿ

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ





ಪನ್ವೇಲ್ ಜ 5,   ಪನ್ವೆಲ್ ಪೂರ್ವ ದ ಯ ಸೆಕ್ಟರ್ 5/A, ಗುರುದ್ವಾರದ ಹಿಂದೆ   ಸ೦ತ ಶ್ರೀ ವೃಂದಾವನ ಬಾಬಾ ಸಮಾಧಿ ಮುಂದಿರದಲ್ಲಿ ತುಳು ಕನ್ನಡಿಗರು ಸ್ಥಾಪಿಸಿರುವ ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಹಾಗೂ  ನ್ಯೂ ಪನ್ವೇಲ್ ನಗರ ಸೇವಕ ಸಂತೋಷ ಜಿ ಶೆಟ್ಟಿ ಇವರೆಲ್ಲರ ಒಗ್ಗಟ್ಟಿನಲ್ಲಿ ಪ್ರಾರಂಭಿಸಿಕೊಂಡಿರುವ

ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದಾ  19 ನೇ ಶ್ರೀ ಅಯ್ಯಪ್ಪ ಮಹಾಪೂಜೆಯ ಜ 1 ಸೋಮವಾರ ಭಕ್ತಿ ಸಂಭ್ರಮದೊಂದಿಗೆ ಆಚರಿಸಲಾಯಿತು

ಬೆಳಗ್ಗೆ  ಮಹಾ ಗಣಪತಿ ಹೋಮ ಬಳಿಕ ಶ್ರೀ ವೃಂದಾವನ ಬಾಬಾ ಭಜನಾ ಮಂಡಳಿ ಭಜನೆ ಅನಂತರ ಜಯ  ಗುರುಸ್ವಾಮಿ ಮಹಾಮಂಗಳಾರತಿಯನ್ನು ನಡೆಸಿದರು.ಮಧ್ಯಾಹ್ನ ಮಹಾಪ್ರಸಾದ ಅನ್ನಸಂತರ್ಪಣೆ ಯಲ್ಲಿ ಸಾವಿರಾರು ಸಂಖ್ಯೆ ಅಯ್ಯಪ್ಪ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು.

ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಕೋರ್ದಬ್ಬು ಭಾರಗ” ಎಂಬ ತುಳು ಐತಿಹಾಸಿಕ ಯಕ್ಷಗಾನ ಪ್ರಸಂಗವನ್ನು ನಡೆಯಿತು

 ಪೂಜಾ ಕಾರ್ಯಕ್ಕೆ ಆಗಮಿಸಿದ   ಪನ್ವೆಲ್ ನ  ಶಾಸಕ ಪ್ರಶಾಂತ್ ಠಾಕೂರ್ . ಮತ್ತು  ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ಪುಣೆ ಯ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಪುತ್ತೂರು ಇವರನ್ನು ನಗರ ಸೇವಕ ಸಂತೋಷ ಜಿ ಶೆಟ್ಟಿ ಪನ್ವಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ( ಪದ್ಮ). ಬಿ ಕೆ ಗುರುಸ್ವಾಮಿ ಮತ್ತಿದ್ದರು ತುಳು ಕನ್ನಡಿಗರು ಗೌರವಿಸಿದರು.

ಪೂಜಾ ಕಾರ್ಯಗಳು ವಿಜ್ರಮ್ಮನೆಯಿಂದ ನಡೆಯಲು ವೃಂದಾವನ ಬಾಬಾ ಭಜನೆ ಮಂಡಳಿಯ ಸದಸ್ಯರು. ಅಯ್ಯಪ್ಪ ಭಕ್ತರು. ಪನ್ವಲ್ ಕರ್ನಾಟಕ ಸಂಘದ ಪದಾಧಿಕಾರಿಗಳು ಸದಸ್ಯರು  ಸಹಕರಿಸಿದರು 



Related posts

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ: ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk