28.4 C
Mumbai
March 7, 2026
Mumbai News Kannada
ಮುಂಬಯಿ

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿ ಯಲ್ಲಿ ತಾರೀಕು 7.1 2024 ನೇ ಆದಿತ್ಯವಾರ ಬೆಳಿಗ್ಗೆ ಸೂರ್ಯೋದಯ ದಿಂದ ಸೂರ್ಯಾಸ್ತದವರೆಗೆ ನಿರಂತರ ವಾಗಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಹಾಗೂ ಭಕ್ತ ಸಮೂಹದ ಸಹಕಾರ ದಿಂದ ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆಯ ಪ್ರಯುಕ್ತ ಶ್ರೀ ರಾಮ ನಾಮ ಜಪ ಯಜ್ಞ ಯಶಸ್ವಿಯಾಗಿ ನೆರವೇರಿತು.

ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪ, ಭೂವಾಜಿ ರವೀಂದ್ರ ಶಾಂತಿ, ಪ್ರವೀಣ್ ಮಾಬಿಯನ್, ಶೇಖರ ಶೆಟ್ಟಿ, ಹಾಗೂ ಗೀತಾ ಶೆಟ್ಟಿ ದೀಪಾ ಪ್ರಜ್ವಲಿಸಿ ಜಪ ಯಜ್ಞಕ್ಕೆ ಚಾಲನೆ ನೀಡಿದರು.

ದಿನವಿಡಿ ರಾಮ ನಾಮ ಜಪಯಜ್ಞ ನಡೆದು ಸಂಜೆ ಮಂಗಲೋತ್ಸವ ದೊಂದಿಗೆ ಮುಕ್ತಾಯಗೊಂಡು, ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪರವರು ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಕುರಿತು ಹಾಗೂ ಜಪ ಯಜ್ಞದ ಮಹತ್ವವನ್ನು ಭಕ್ತರಿಗೆ ಸಂಕಿಪ್ತವಾಗಿ ವಿವರಿಸಿದರು, ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಪುಣ್ಯ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರುವಲ್ಲಿ
ಮಂದಿರದ ಟ್ರಸ್ಟಿಗಳಾದ ಶ್ರೀಮತಿ ಲಲಿತಾ ಬಿ ಕೆ ಸೀನ, ಹಾಗೂ ಪರಿವಾರ ಮತ್ತು ಅರ್ಚಕರಾದ ರಾಜೇಶ್ ಭಟ್ ಹಾಗೂ ಅರ್ಚಕ ವೃಂದದವರು ಸಂಪೂರ್ಣ ಸಹಕಾರ ನೀಡಿದರು.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ – ಪುಸ್ತಕ ಸಾಮಗ್ರಿ ವಿತರಣೆ

Mumbai News Desk

ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,   ಆರ್ಥಿಕ ನೆರವು ವಿತರಣೆ,

Mumbai News Desk

ಮಹಾರಾಷ್ಟ್ರ ಮಾನವ ಸೇವಾ ಸಂಘ ದಹಿಸರ್ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರುಇವರ ಸಹಯೋಗದಲ್ಲಿ” ಆಟಿದ ಪೊರ್ಲ ಪೊಲಬು”

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ -ಖೋಪರ್‌ಖೈರ್ನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ ದಶಮಾನೋತ್ಸವ ಆಚರಣೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಪುರಂದರ ದಾಸರ ಆರಾಧನಾ ಮಹೋತ್ಸವ ಹಾಗೂ ಪುರಂದರದಾಸರ ಭಜನಾ ಸ್ಪರ್ಧೆ

Mumbai News Desk