September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್” ಹೆಸರಿನಲ್ಲಿ ತೆರೆದ ವೇದಿಕೆ  ನಿರ್ಮಾಣ





      ಮುಂಬಯಿ ಜ12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶಿತಾರ್ಥ,ಮೆಹೆಂದಿ,ಮದುವೆ, ಔತನಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್. ಎಂಬ ಹೆಸರಿನಲ್ಲಿ ತೆರೆದ ವೇದಿಕೆ ನಿರ್ಮಾಣ

  ಈ. ಓಪನ್ ಏರ್ ಗಾರ್ಡನ್  ಸಂಪೂರ್ಣ ಪ್ರಾಯೋಜಕತೆಯನ್ನು  ಒಕ್ಕೂಟದ ವಿಶೇಷ ಮಹಾ-ನಿರ್ದೇಶಕರಾದ ಮುಂಬೈಯ ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಸಿ. ಎಂ. ಡಿ. ತೋನ್ಸೆ ಆನಂದ್ ಎಂ. ಶೆಟ್ಟಿಯವರ ಮತ್ತು ಶಶಿರೇಖಾ ಆನಂದ ಎಂ.ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು, ವಿಶೇಷ ಮಹಾ ನಿರ್ದೇಶಕರಾದ  ಪ್ರವೀಣ್ ಬೋಜ ಶೆಟ್ಟಿ ಹಾಗೂ ಕೋಶಾಧಿಕಾರಿಯಾದ  ಉಳ್ತೂರು ಮೋಹನದಾಸ ಶೆಟ್ಟಿಯವರು ಜೊತೆ ಸೇರಿ ಗೌರವ ಪೂರ್ವಕವಾಗಿ  ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. 

    ಓಪನ್ ಏರ್ ಗಾರ್ಡನ್ ಯೋಜನೆಯ ಪೂರ್ತಿ ಜವಾಬ್ದಾರಿಯನ್ನು ಮತ್ತು ಅದರ ಕೆಲಸ ಕಾರ್ಯಗಳನ್ನು ತನ್ನ ಯೋಚನೆಯ ಪ್ರಕಾರದಂತೆ ಮಾಡಿ ಈ ವರ್ಷ 2024 ಡಿಸೆಂಬರ್ ಕೊನೆಯಲ್ಲಿ   ಒಕ್ಕೂಟಕ್ಕೆ ಒಪ್ಪಿಸುತ್ತೇನೆ ಎಂದು  ತೋನ್ಸೆ   ಆನಂದ ಶೆಟ್ಟಿಯವರು   ಭರವಸೆಯ ಮಾತನ್ನು ನೀಡಿದ್ದಾರೆ.

ಈ  ಯೋಜನೆಗೆ ಸಹಕಾರ ನೀಡಿದ   ತೋನ್ಸೆ ಶಶಿರೇಖಾ ಆನಂದ ಎಂ. ಶೆಟ್ಟಿಯವರಿಗೆ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ . ಉಪಾಧ್ಯಕ್ಷರುಕರ್ನಿರೆ ವಿಶ್ವನಾಥ ಶೆಟ್ಟಿ.ಗೌ.ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ .ಜೊತೆ -ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಮತ್ತು ಮಹಾ ನಿರ್ದೇಶಕರು, ನಿರ್ದೇಶಕರು, ಮಹಾ-ಪೋಷಕರು, ಪೋಷಕರು, ದಾನಿಗಳು,ಕಾರ್ಯಕಾರಿ ಸಮಿತಿ ಸದಸ್ಯರು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ಮುಂಬೈ-ಮಂಗಳೂರು ‘ವಂದೇ ಭಾರತ್ ಸ್ಲೀಪರ್’ ಆರಂಭಕ್ಕೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ, ಸೌಲಭ್ಯಕ್ಕೆ ಮನವಿ: ಸಚಿವ ವಿ. ಸೋಮಣ್ಣಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಒತ್ತಾಯ

Mumbai News Desk

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk