July 23, 2026
Mumbai News Kannada
ಸುದ್ದಿ

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,







     ಬಂಟ್ವಾಳ  ಜ24:  ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಟ್ರಂಪ್ ಸುಂಕ ನೀತಿಯಿಂದ ತಲ್ಲಣ : ಭಾರತ ಸೇರಿದಂತೆ ವಿಶ್ವದಾದ್ಯಂತ ಶೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Mumbai News Desk

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಜವಾಬ್ದಾರಿ: ಮಹಾತ್ಮ ಜ್ಯೋತಿರಾವ್ ಫುಲೆ 200ನೇ ಜನ್ಮ ದಿನಾಚರಣೆಯ ಉನ್ನತ ಮಟ್ಟದ ಸಮಿತಿಗೆ ನಾಮನಿರ್ದೇಶನ

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk