September 6, 2026
Mumbai News Kannada
ಸುದ್ದಿ

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ





ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿದ್ದ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಗೊ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.ಮಾತುಕತೆ ವೇಳೆ ಶೆಟ್ಟರ್ ಮನವೊಲಿಸುವಲ್ಲಿ ಅಮಿತಾ ಯಶಸ್ವಿಯಾಗಿದ್ದು ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.
ಬಿಜೆಪಿ ಪಕ್ಷ ಮರು ಸೇರ್ಪಡೆಗೊ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಾಗಿರುವ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು ರಾಜ್ಯ ರಾಜಕೀಯ ದಲ್ಲಿ ಕುತೂಹಲ ಮೂಡಿಸಿದೆ.
ಆಗಸ್ಟ್ ತಿಂಗಳಿನಲ್ಲಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ನ್ಯೂಸ್ ಪ್ರತಿನಿಧಿ ಜಗಧೀಶ್ ಶೆಟ್ಟರ ಬಳಿ ಬಿಜೆಪಿ ಮರು ಸೇರ್ಪಡೆ ವಿಷಯ ಎತ್ತಿದಾಗ, ಶೆಟ್ಟರ್ ಕಡ ಖಂಡಿತವಾಗಿ ನಿರಾಕರಿಸಿದ್ದರು, ಜಗಧೀಶ್ ಶೆಟ್ಟರ್ ಅವರ ಇಂದಿನ ನಡೆ ರಾಜಕೀಯದಲ್ಲಿ ಯುವುದೂ ಅಸಾಧ್ಯವಲ್ಲ ಎಂದು ತೋರಿಸಿದೆ.



Related posts

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk

ಮೂಡುಬಿದಿರೆ ಪುರಸಭೆಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ, ಕಂಬಳದ ಗದ್ದೆಯಂತಾದ ಸಮಗಾರಗುಂಡಿ : ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳ ಪರವಾಗಿ ಸಮಾಜ ಸೇವಕ ಸತೀಶ್ ಬಂಗೇರ ತೀವ್ರ ಆಕ್ಷೇಪ

Mumbai News Desk

ಶಿವಸೇನಾ ದಕ್ಷಿಣ ಭಾರತಿಯ ಘಟಕದಿಂದ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯ ಬಗ್ಗೆ ಶಿಬಿರ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”

Mumbai News Desk