28.4 C
Mumbai
March 7, 2026
Mumbai News Kannada
ಪ್ರಕಟಣೆ

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.





ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ ಇದರ 37ನೇ ವಾರ್ಷಿಕೋತ್ಸವ ಮತ್ತು ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ
ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರಧಾನ ಸಮಾರಂಭ ರವಿವಾರ ದಿನಾಂಕ 11.02.2024 ಸಾಯಂಕಾಲ 4.30 ಗಂಟೆಗೆ
ಲೇವಾ ಭವನ, ಡಿ. ಎನ್. ಸಿ. ರೋಡ್, ದತ್ತ ನಗರ, ಡೊಂಬಿವಲಿ (ಪೂರ್ವ) ದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ದಿವಾಕರ ಟಿ. ಶೆಟ್ಟಿ ಇಂದ್ರಾಳಿ (ಕಾರ್ಯಾಧ್ಯಕ್ಷರು : ಕರ್ನಾಟಕ ಸಂಘ, ಡೊಂಬಿವಲಿ) ವಹಿಸಲಿರುವರು, ಅತಿಥಿಗಳಾಗಿ ಶ್ರೀ ಆನಂದ ಡಿ. ಶೆಟ್ಟಿ ಎಕ್ಕಾ‌ರು ( ಕಾರ್ಯಾಧ್ಯಕ್ಷರು-ಬಂಟ್ಸ್‌ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ), ಶ್ರೀ ಸುಬ್ಬಯ್ಯ ಎ. ಶೆಟ್ಟಿ ( ಉಪ ಕಾರ್ಯಾಧ್ಯಕ್ಷರು -ಸಮಾಜ ಕಲ್ಯಾಣ ಸಮಿತಿ, ಬಂಟ್ಸ್ ಸಂಘ ಮುಂಬಯಿ), ಶ್ರೀ ಪ್ರಭಾಕರ್ ಆರ್. ಶೆಟ್ಟಿ ( ಉಪ ಕಾರ್ಯಾಧ್ಯಕ್ಷರು -ಬಂಟ್ಸ್ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ), ಶ್ರೀ ಜಯಂತ್ ಎನ್. ಶೆಟ್ಟಿ ( ಅಧ್ಯಕ್ಷರು – ಕನ್ನಡ ಸಂಘ,ವರ್ತಕ್ ನಗರ, ಥಾಣೆ) ಶ್ರೀಮತಿ ಅಭಿಜ್ಞಾ ಪ್ರಕಾರ ಹೆಗ್ಡೆ(ಭರತ ನಾಟ್ಯ ಕಲಾವಿದೆ) ಉಪಸ್ಥಿತರಿರುವರು.

ಪ್ರಶಸ್ತಿ ವಿಜೇತರು :
ಕಥಾ ಪ್ರಶಸ್ತಿ – ಶ್ರೀಮತಿ ದಾಕ್ಷಾಯಣಿ ಯಡಹಳ್ಳಿ, ಡೊಂಬಿವಲಿ.
ಕಾವ್ಯ ಪ್ರಶಸ್ತಿ – ಶ್ರೀಮತಿ ಮಿಲನ ಕೆ. ಭರತ್, ಕೊಡಗು, ಕರ್ನಾಟಕ

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರಿಂದ ನೃತ್ಯ ಕಾರ್ಯಕ್ರಮ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರಾದ ಪವಿ ಆರ್ಟ್ಸ್ ಇದರ ಸಂಚಾಲಕರಾದ ಗುರು ಶ್ರೀ ಪವಿತ್ರ ಭಟ್ ಮತ್ತು ಶ್ರೀಮತಿ ಅಪರ್ಣ ಶಾಸ್ತ್ರಿ ಭಟ್ ಅವರ ತಂಡದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ಸಾಹಿತ್ಯಾಭಿಮಾನಿಗಳು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ರಮೇಶ್‌ ಎ. ಶೆಟ್ಟಿ, ಗೌ.ಪ್ರ. ಕಾರ್ಯದರ್ಶಿ ಸಂತೋಷ ಪಿ. ಶೆಟ್ಟಿ, ಕೋಶಾಧಿಕಾರಿ ಚಂದ್ರ ಎನ್. ನಾಯ್ಕ್, ಸಂಘಟನಾ ಕಾರ್ಯದರ್ಶಿ ಬಾಬು ಕೆ. ಮೊಗವೀರ, ಸಲಹೆಗಾರರಾದ ಶ್ರೀ ಸುಕುಮಾರ ಎನ್. ಶೆಟ್ಟಿ, ಪ್ರಶಸ್ತಿ ಸಮಿತಿಯ ಸಲಹೆಗಾರರಾದ ಶ್ರೀ ಶೇಖರ ಆರ್. ಶೆಟ್ಟಿ, ಇನ್ನ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk

ಮುಂಬಯಿಯಲ್ಲಿ ಆಗಸ್ಟ್ 15ರಿಂದ ನಾಗಶ್ರೀ ಜಿ ಎಸ್ ತಂಡ ಮತ್ತು ಬಡಗುತಿಟ್ಟಿನ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ

Mumbai News Desk

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk