28.4 C
Mumbai
March 7, 2026
Mumbai News Kannada
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ





ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿ ಯವರನ್ನು ಕಾರ್ಯದರ್ಶಿ ಯಾಗಿ ನಿಯುಕ್ತಿಗೊಳಿಸಿ ಮುಂಬಯಿ ವಿಭಾಗದ ಅಧ್ಯಕ್ಷರಾದ ರಾಖೀ ಜಾಧವ್ ನಿಯುಕ್ತಿ ಪತ್ರವನ್ನು ನೀಡಿರುತ್ತಾರೆ.
ಮಹಾದೇವ ಪೂಜಾರಿ ಪರಿಚಯ
ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು ನಾಲ್ಕು ದಶಕಗಳ ಹಿಂದೆ ಮುಂಬಯಿ ಮಹಾನಗರಕ್ಕೆ ಪಾದಾರ್ಪಣೆಗೈದು ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ರಾತ್ರಿ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಿದರು.
ಆ ಬಳಿಕ ವಿವಿಧ ಹಂತದಲ್ಲಿ ಮುನ್ನೆಡೆದು ವಿದ್ಯೆ – ಉದ್ಯೋಗ ಎರಡಕ್ಕೂ ಮಹತ್ವ ನೀಡಿ ಯಶಸ್ವಿಯಾಗಿ ತದನಂತರ ಸ್ವಂತ ಉದ್ಯಮದತ್ತ ಒಲವು ತೋರಿ ಓರ್ವ ಉದ್ಯಮಿಯಾಗಿ ರೂಪುಗೊಂಡರು.
ಉದ್ಯಮದ ಜೊತೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಇವರು ಮುಂಬಯಿ ಗಾಂವ್ದೇವಿ ಪ್ರತಿಷ್ಠಾನದ ಅಧ್ಯಕ್ಷರಾಗಿ, ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ ಸಂಸ್ಥೆಗಳ ಮೂಲಕ ಸಮಾಜಸೇವೆಗೈಯುತ್ತಿದ್ದಾರೆ. ತನ್ನ ಹುಟ್ಟೂರಿನ ಸಮುದಾಯ ಬಾಂಧವರನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ನೂತನ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುತ್ತಾರೆ.



Related posts

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಯಕ್ಷಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

Mumbai News Desk