July 23, 2026
Mumbai News Kannada
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ







ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿ ಯವರನ್ನು ಕಾರ್ಯದರ್ಶಿ ಯಾಗಿ ನಿಯುಕ್ತಿಗೊಳಿಸಿ ಮುಂಬಯಿ ವಿಭಾಗದ ಅಧ್ಯಕ್ಷರಾದ ರಾಖೀ ಜಾಧವ್ ನಿಯುಕ್ತಿ ಪತ್ರವನ್ನು ನೀಡಿರುತ್ತಾರೆ.
ಮಹಾದೇವ ಪೂಜಾರಿ ಪರಿಚಯ
ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು ನಾಲ್ಕು ದಶಕಗಳ ಹಿಂದೆ ಮುಂಬಯಿ ಮಹಾನಗರಕ್ಕೆ ಪಾದಾರ್ಪಣೆಗೈದು ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ರಾತ್ರಿ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಿದರು.
ಆ ಬಳಿಕ ವಿವಿಧ ಹಂತದಲ್ಲಿ ಮುನ್ನೆಡೆದು ವಿದ್ಯೆ – ಉದ್ಯೋಗ ಎರಡಕ್ಕೂ ಮಹತ್ವ ನೀಡಿ ಯಶಸ್ವಿಯಾಗಿ ತದನಂತರ ಸ್ವಂತ ಉದ್ಯಮದತ್ತ ಒಲವು ತೋರಿ ಓರ್ವ ಉದ್ಯಮಿಯಾಗಿ ರೂಪುಗೊಂಡರು.
ಉದ್ಯಮದ ಜೊತೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಇವರು ಮುಂಬಯಿ ಗಾಂವ್ದೇವಿ ಪ್ರತಿಷ್ಠಾನದ ಅಧ್ಯಕ್ಷರಾಗಿ, ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ ಸಂಸ್ಥೆಗಳ ಮೂಲಕ ಸಮಾಜಸೇವೆಗೈಯುತ್ತಿದ್ದಾರೆ. ತನ್ನ ಹುಟ್ಟೂರಿನ ಸಮುದಾಯ ಬಾಂಧವರನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ನೂತನ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುತ್ತಾರೆ.



Related posts

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಮಧುರಾ ಹರೀಶ್ ಪಾಂಡು ಶೆಟ್ಟಿ ಅವರು ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ.

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk