September 6, 2026
Mumbai News Kannada
ಸುದ್ದಿ

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ





ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ನೇತೃತ್ವದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಂಬಯಿ ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು ಅದರಲ್ಲಿ ಕನ್ನಡಿಗ ಮಹಾದೇವ ಪೂಜಾರಿ ಯವರನ್ನು ಕಾರ್ಯದರ್ಶಿ ಯಾಗಿ ನಿಯುಕ್ತಿಗೊಳಿಸಿ ಮುಂಬಯಿ ವಿಭಾಗದ ಅಧ್ಯಕ್ಷರಾದ ರಾಖೀ ಜಾಧವ್ ನಿಯುಕ್ತಿ ಪತ್ರವನ್ನು ನೀಡಿರುತ್ತಾರೆ.
ಮಹಾದೇವ ಪೂಜಾರಿ ಪರಿಚಯ
ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಊರಿನವರಾದ ಮಹಾದೇವ ಪೂಜಾರಿಯವರು ನಾಲ್ಕು ದಶಕಗಳ ಹಿಂದೆ ಮುಂಬಯಿ ಮಹಾನಗರಕ್ಕೆ ಪಾದಾರ್ಪಣೆಗೈದು ಕ್ಯಾಂಟೀನ್ ಕಾರ್ಮಿಕನಾಗಿ ದುಡಿದು ರಾತ್ರಿ ಶಾಲೆಯಲ್ಲಿ ವ್ಯಾಸಂಗ ಮುಂದುವರೆಸಿದರು.
ಆ ಬಳಿಕ ವಿವಿಧ ಹಂತದಲ್ಲಿ ಮುನ್ನೆಡೆದು ವಿದ್ಯೆ – ಉದ್ಯೋಗ ಎರಡಕ್ಕೂ ಮಹತ್ವ ನೀಡಿ ಯಶಸ್ವಿಯಾಗಿ ತದನಂತರ ಸ್ವಂತ ಉದ್ಯಮದತ್ತ ಒಲವು ತೋರಿ ಓರ್ವ ಉದ್ಯಮಿಯಾಗಿ ರೂಪುಗೊಂಡರು.
ಉದ್ಯಮದ ಜೊತೆ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ಇವರು ಮುಂಬಯಿ ಗಾಂವ್ದೇವಿ ಪ್ರತಿಷ್ಠಾನದ ಅಧ್ಯಕ್ಷರಾಗಿ, ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿಯ ಅಧ್ಯಕ್ಷರಾಗಿರುವುದಲ್ಲದೆ ಹಲವಾರು ಸಂಘ ಸಂಸ್ಥೆಗಳ ಮೂಲಕ ಸಮಾಜಸೇವೆಗೈಯುತ್ತಿದ್ದಾರೆ. ತನ್ನ ಹುಟ್ಟೂರಿನ ಸಮುದಾಯ ಬಾಂಧವರನ್ನು ಒಗ್ಗೂಡಿಸಿ ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘ ಸ್ಥಾಪಿಸಿ ಅದರ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳ ಜೊತೆಗೆ ರಾಜಕೀಯ ಪಯಣ ಆರಂಭಿಸಿದ ಇವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ನೂತನ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುತ್ತಾರೆ.



Related posts

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk