30.5 C
Mumbai
June 8, 2026
Mumbai News Kannada
ಸುದ್ದಿ

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ





ಲಕ್ಷ್ಮೀಪುರ : ಕಾರ್ಕಳ ತಾ.29.02.2024

 “ವಿಪ್ರ ಸಂಘಟನೆಯು ತನ್ನ ಮೂಲ ಧ್ಯೇಯೋದ್ದೇಶಗಳನ್ನು ಅನುಸರಿಸುತ್ತಾ ತಮಗಿರುವ ಗುರುತರ ಜವಾಬ್ದಾರಿಗಳಾದ   ಸಮಾಜದಲ್ಲಿನ ಸಂಸ್ಕಾರ  , ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಯನ್ನು ಮಾಡುವಲ್ಲಿ ಯಶಸ್ಸನ್ನು ಸಾಧಿಸಲಿ ” ಹೀಗೆಂದು ಹಿರಿಯ ವೈದಿಕರಾದ ವೇದಮೂರ್ತಿ ಹರಿ ಭಟ್ ಸಗ್ರಿ ಇವರು ಕರೆಯಿತ್ತರು.  ಕಾರ್ಕಳದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಿದ ‘ಸಾರಸ್ಬತ ವೈದಿಕ  ಸೇವಾ  ಪ್ರತಿಷ್ಟಾನಮ್ (ರಿ) ಸಂಸ್ಥೆಯನ್ನು ಉದ್ಘಾಟಿಸಿ   ಅವರು   ಮಾತನಾಡುತ್ತಿದ್ದರು. 

ಸಂಸ್ಥಾನ   ಗೌಡಪಾದಾಚಾರ್ಯ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದಿಂದ ಕಾರ್ಕಳದ ಲಕ್ಶ್ಮೀಪುರದ ಪಾವನ ಕ್ಷೇತ್ರದಲ್ಲಿ ಸಾರಸ್ವತ ವೈದಿಕರ ಸಂಘಟನೆಯ ಶುಭಾರಂಭವಾಗಿದ್ದು  ಈ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಹೊಣೆಗಾರಿಕೆ ಎಲ್ಲರ ಮೇಲಿದೆ ” ಎಂದು ಅಭಿಪ್ರಾಯ ಪಟ್ಟರು. ಸಭಾದ್ಯಕ್ಷತೆಯನ್ನು  ಸುರೇಶ್ ಭಟ್ ಮುಂಬೈ ವಹಿಸಿದ್ದರು.

  ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕ ಸದಾಶಿವ ನಾಯಕ್ ವಿಟ್ಲ  ಹಾಗೂ ಹರಿಹರಪುರಮ್ ಪ್ರಭೋದಿನಿ ಗುರುಕುಲಮ್ ನ ಪ್ರಧಾನಾಚಾರ್ಯ ಡಾ. ಕಾರ್ತಿಕ್ ವಾಗ್ಳೆ ಆಗಮಿಸಿದ್ದು 

ವೇದಿಕೆಯಲ್ಲಿ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ನಾಯಕ್ , ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಧರ ವಾಗ್ಳೆ , ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ ಸಾಲ್ವಣ್ ಕರ್ , ಮೊಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಎಸ್.ಆರ್.ಸತೀಶಚಂದ್ರ , ಮೊಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ರವೀಂದ್ರನಾಥ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

   ಈ ಸಂದರ್ಭದಲ್ಲಿ ಮಂದಿರಕ್ಕೆ ಆಗಮಿಸಿದ ಶಾಸಕರಾದ ಸುನೀಲ್ ಕುಮಾರ್ ” ಆದಿಶಕ್ತಿಯ ಈ ಕ್ಷೇತ್ರದಲ್ಲಿ ಆರಂಭಗೊಂಡ ವೈದಿಕರ ಸಂಘಟನೆಯು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನುನಿರ್ವಹಿಸಿ ಯಶಸ್ವಿಯಾಗಲಿ ” ಎಂದು ಶುಭಹಾರೈಸಿದರು.

     ವೈದಿಕ ಸಮೂಹದ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ ಸಾರಸ್ವತ ವೈದಿಕರು ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ :

ಪಿ.ಆರ್.ರವಿಶಂಕರ್ 8483980035



Related posts

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ

Mumbai News Desk

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk