July 23, 2026
Mumbai News Kannada
ಸುದ್ದಿ

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ







ಲಕ್ಷ್ಮೀಪುರ : ಕಾರ್ಕಳ ತಾ.29.02.2024

 “ವಿಪ್ರ ಸಂಘಟನೆಯು ತನ್ನ ಮೂಲ ಧ್ಯೇಯೋದ್ದೇಶಗಳನ್ನು ಅನುಸರಿಸುತ್ತಾ ತಮಗಿರುವ ಗುರುತರ ಜವಾಬ್ದಾರಿಗಳಾದ   ಸಮಾಜದಲ್ಲಿನ ಸಂಸ್ಕಾರ  , ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಯನ್ನು ಮಾಡುವಲ್ಲಿ ಯಶಸ್ಸನ್ನು ಸಾಧಿಸಲಿ ” ಹೀಗೆಂದು ಹಿರಿಯ ವೈದಿಕರಾದ ವೇದಮೂರ್ತಿ ಹರಿ ಭಟ್ ಸಗ್ರಿ ಇವರು ಕರೆಯಿತ್ತರು.  ಕಾರ್ಕಳದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಿದ ‘ಸಾರಸ್ಬತ ವೈದಿಕ  ಸೇವಾ  ಪ್ರತಿಷ್ಟಾನಮ್ (ರಿ) ಸಂಸ್ಥೆಯನ್ನು ಉದ್ಘಾಟಿಸಿ   ಅವರು   ಮಾತನಾಡುತ್ತಿದ್ದರು. 

ಸಂಸ್ಥಾನ   ಗೌಡಪಾದಾಚಾರ್ಯ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದಿಂದ ಕಾರ್ಕಳದ ಲಕ್ಶ್ಮೀಪುರದ ಪಾವನ ಕ್ಷೇತ್ರದಲ್ಲಿ ಸಾರಸ್ವತ ವೈದಿಕರ ಸಂಘಟನೆಯ ಶುಭಾರಂಭವಾಗಿದ್ದು  ಈ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಹೊಣೆಗಾರಿಕೆ ಎಲ್ಲರ ಮೇಲಿದೆ ” ಎಂದು ಅಭಿಪ್ರಾಯ ಪಟ್ಟರು. ಸಭಾದ್ಯಕ್ಷತೆಯನ್ನು  ಸುರೇಶ್ ಭಟ್ ಮುಂಬೈ ವಹಿಸಿದ್ದರು.

  ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕ ಸದಾಶಿವ ನಾಯಕ್ ವಿಟ್ಲ  ಹಾಗೂ ಹರಿಹರಪುರಮ್ ಪ್ರಭೋದಿನಿ ಗುರುಕುಲಮ್ ನ ಪ್ರಧಾನಾಚಾರ್ಯ ಡಾ. ಕಾರ್ತಿಕ್ ವಾಗ್ಳೆ ಆಗಮಿಸಿದ್ದು 

ವೇದಿಕೆಯಲ್ಲಿ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ನಾಯಕ್ , ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಧರ ವಾಗ್ಳೆ , ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ ಸಾಲ್ವಣ್ ಕರ್ , ಮೊಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಎಸ್.ಆರ್.ಸತೀಶಚಂದ್ರ , ಮೊಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ರವೀಂದ್ರನಾಥ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

   ಈ ಸಂದರ್ಭದಲ್ಲಿ ಮಂದಿರಕ್ಕೆ ಆಗಮಿಸಿದ ಶಾಸಕರಾದ ಸುನೀಲ್ ಕುಮಾರ್ ” ಆದಿಶಕ್ತಿಯ ಈ ಕ್ಷೇತ್ರದಲ್ಲಿ ಆರಂಭಗೊಂಡ ವೈದಿಕರ ಸಂಘಟನೆಯು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನುನಿರ್ವಹಿಸಿ ಯಶಸ್ವಿಯಾಗಲಿ ” ಎಂದು ಶುಭಹಾರೈಸಿದರು.

     ವೈದಿಕ ಸಮೂಹದ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ ಸಾರಸ್ವತ ವೈದಿಕರು ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ :

ಪಿ.ಆರ್.ರವಿಶಂಕರ್ 8483980035



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ, ಅಪರೂಪದ ಸಾಧಕ ಹೊಸಬೆಟ್ಟು ಕೆ. ಆರ್. ಪುತ್ರನ್ ನಿಧನ

Mumbai News Desk