September 6, 2026
Mumbai News Kannada
ಸುದ್ದಿ

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ





ಲಕ್ಷ್ಮೀಪುರ : ಕಾರ್ಕಳ ತಾ.29.02.2024

 “ವಿಪ್ರ ಸಂಘಟನೆಯು ತನ್ನ ಮೂಲ ಧ್ಯೇಯೋದ್ದೇಶಗಳನ್ನು ಅನುಸರಿಸುತ್ತಾ ತಮಗಿರುವ ಗುರುತರ ಜವಾಬ್ದಾರಿಗಳಾದ   ಸಮಾಜದಲ್ಲಿನ ಸಂಸ್ಕಾರ  , ಸಂಸ್ಕೃತಿಯ ರಕ್ಷಣೆ ಮತ್ತು ಬೆಳವಣಿಗೆಯನ್ನು ಮಾಡುವಲ್ಲಿ ಯಶಸ್ಸನ್ನು ಸಾಧಿಸಲಿ ” ಹೀಗೆಂದು ಹಿರಿಯ ವೈದಿಕರಾದ ವೇದಮೂರ್ತಿ ಹರಿ ಭಟ್ ಸಗ್ರಿ ಇವರು ಕರೆಯಿತ್ತರು.  ಕಾರ್ಕಳದ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಿದ ‘ಸಾರಸ್ಬತ ವೈದಿಕ  ಸೇವಾ  ಪ್ರತಿಷ್ಟಾನಮ್ (ರಿ) ಸಂಸ್ಥೆಯನ್ನು ಉದ್ಘಾಟಿಸಿ   ಅವರು   ಮಾತನಾಡುತ್ತಿದ್ದರು. 

ಸಂಸ್ಥಾನ   ಗೌಡಪಾದಾಚಾರ್ಯ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದಿಂದ ಕಾರ್ಕಳದ ಲಕ್ಶ್ಮೀಪುರದ ಪಾವನ ಕ್ಷೇತ್ರದಲ್ಲಿ ಸಾರಸ್ವತ ವೈದಿಕರ ಸಂಘಟನೆಯ ಶುಭಾರಂಭವಾಗಿದ್ದು  ಈ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಹೊಣೆಗಾರಿಕೆ ಎಲ್ಲರ ಮೇಲಿದೆ ” ಎಂದು ಅಭಿಪ್ರಾಯ ಪಟ್ಟರು. ಸಭಾದ್ಯಕ್ಷತೆಯನ್ನು  ಸುರೇಶ್ ಭಟ್ ಮುಂಬೈ ವಹಿಸಿದ್ದರು.

  ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕ ಸದಾಶಿವ ನಾಯಕ್ ವಿಟ್ಲ  ಹಾಗೂ ಹರಿಹರಪುರಮ್ ಪ್ರಭೋದಿನಿ ಗುರುಕುಲಮ್ ನ ಪ್ರಧಾನಾಚಾರ್ಯ ಡಾ. ಕಾರ್ತಿಕ್ ವಾಗ್ಳೆ ಆಗಮಿಸಿದ್ದು 

ವೇದಿಕೆಯಲ್ಲಿ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ನಾಯಕ್ , ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಧರ ವಾಗ್ಳೆ , ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ ಸಾಲ್ವಣ್ ಕರ್ , ಮೊಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಎಸ್.ಆರ್.ಸತೀಶಚಂದ್ರ , ಮೊಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ರವೀಂದ್ರನಾಥ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

   ಈ ಸಂದರ್ಭದಲ್ಲಿ ಮಂದಿರಕ್ಕೆ ಆಗಮಿಸಿದ ಶಾಸಕರಾದ ಸುನೀಲ್ ಕುಮಾರ್ ” ಆದಿಶಕ್ತಿಯ ಈ ಕ್ಷೇತ್ರದಲ್ಲಿ ಆರಂಭಗೊಂಡ ವೈದಿಕರ ಸಂಘಟನೆಯು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನುನಿರ್ವಹಿಸಿ ಯಶಸ್ವಿಯಾಗಲಿ ” ಎಂದು ಶುಭಹಾರೈಸಿದರು.

     ವೈದಿಕ ಸಮೂಹದ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ ಸಾರಸ್ವತ ವೈದಿಕರು ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ :

ಪಿ.ಆರ್.ರವಿಶಂಕರ್ 8483980035



Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಕರ್ನಾಟಕ : ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬಯಿ ನಗರಕ್ಕೆ – ಭಕ್ತಿ ಪೂರ್ವಕ ಸ್ವಾಗತ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk