July 23, 2026
Mumbai News Kannada
ಸುದ್ದಿ

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.







ಮುಂಬಯಿ ಫೆ. 14: ದೇಶದಲ್ಲಿನ ರಾಜ್ಯವಾರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಸ್ಯೆ ಬಗ್ಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಸೌರಭ್ ಗಾರ್ಗ್ ರವರ ಅಧ್ಯಕ್ಷತೆಯಲ್ಲಿ ರಾಜ್ಯದ ವಿವಿಧ ಸದಸ್ಯರುನ್ನೊಳಗೊಂಡ ಸಮಸ್ಯೆ ನಿವಾರಣೆ ಸಭೆಯು ಇತ್ತೀಚೆಗೆ ದೆಹಲಿಯ 29ನೇ ದ್ವಾರಕ ಹೌಸ್ ನಲ್ಲಿ ಜರುಗಿತು.

      ರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಈ ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆಯ ಸದಸ್ಯರಾದ ಡಾ. ಹರೀಶ್ ಬಿ ಶೆಟ್ಟಿ ಸಭೆಯಲ್ಲಿ ಆಹ್ವಾನಿತ ಸದಸ್ಯರಾಗಿ ಉಪಸ್ಥಿತರಿದ್ದು, ಮಹಾರಾಷ್ಟ್ರ ರಾಜ್ಯದ ಪ್ರತಿನಿಧಿಯಾಗಿ ಭಿಕ್ಷಾಟನೆ,  ಮಂಗಳ ಮುಖಿ, ವರಿಷ್ಠ ನಾಗರಿಕರ ಸಮಸ್ಯೆ ಮತ್ತು ರಾಜ್ಯದಲ್ಲಿ ನಿಷೇಧಿಸಲ್ಪಟ್ಟ ತಂಬಾಕು ವಸ್ತುಗಳ ಮಾರಾಟದ ಬಗ್ಗೆ ತಮ್ಮ ಅಭಿಪ್ರಾಯ ಸಭೆಯಲ್ಲಿ ಮಂಡಿಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ರಾಜ್ಯದಲ್ಲಿನ ಸಾಮಾಜಿಕ ಅವ್ಯವಸ್ಥೆಯನ್ನು ಸಚಿವಾಲಯ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸುವಂತೆ ಸಭೆಯ ಅಧ್ಯಕ್ಷರಿಗೆ ಮನವಿ ಮಾಡಿದರು.

      ಸಭೆಯಲ್ಲಿ  ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಚಿವಾಲಯ ಕಾರ್ಯಾಧ್ಯಕ್ಷೆ ರಾಧಿಕಾ ಚಕ್ರವರ್ತಿ, ಕಾರ್ಯದರ್ಶಿ ಸಂಜಯ್ ಪಾಂಡೆ,  ಐಪಿಎಸ್ ಅಧಿಕಾರಿ ನೀರಜ್ ಕುಮಾರ್ ಗುಪ್ತ ಮತ್ತು ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಮಿತಿಯ ನಿರ್ದೇಶಕರಾದ ಸಿದ್ ಗುಪ್ತ ಉಪಸ್ಥಿತರಿದ್ದರು.

      ಸಭೆಯಲ್ಲಿ ಮಹಾರಾಷ್ಟ್ರ ಹೊರತು ಹರಿಯಾಣ ಕೇರಳ ಮತ್ತು ಉತ್ತರ ಪ್ರದೇಶದ ಅಧಿಕೃತ ಸದಸ್ಯರು ರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಈ ವಿಶೇಷ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ರಾಜ್ಯಗಳ ಸಾಮಾಜಿಕ ರಕ್ಷಣೆ ನ್ಯಾಯ ಹಾಗೂ ಸಬಲೀಕರಣದ ಬಗ್ಗೆ ಸಮಸ್ಯೆಗಳ ಪರಿಹಾರದ ಕುರಿತು ಸುಧೀರ್ಘ ಚರ್ಚೆ ನಡೆಸಿದರು.



Related posts

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಪತ್ರಕರ್ತರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ

Mumbai News Desk

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ, ಸಂಸದರಿಗೆ ಮನವಿ

Mumbai News Desk

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk