September 6, 2026
Mumbai News Kannada
ಸುದ್ದಿ

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.





ಮುಂಬಯಿ ಫೆ. 14: ದೇಶದಲ್ಲಿನ ರಾಜ್ಯವಾರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಮಸ್ಯೆ ಬಗ್ಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಸೌರಭ್ ಗಾರ್ಗ್ ರವರ ಅಧ್ಯಕ್ಷತೆಯಲ್ಲಿ ರಾಜ್ಯದ ವಿವಿಧ ಸದಸ್ಯರುನ್ನೊಳಗೊಂಡ ಸಮಸ್ಯೆ ನಿವಾರಣೆ ಸಭೆಯು ಇತ್ತೀಚೆಗೆ ದೆಹಲಿಯ 29ನೇ ದ್ವಾರಕ ಹೌಸ್ ನಲ್ಲಿ ಜರುಗಿತು.

      ರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಈ ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆಯ ಸದಸ್ಯರಾದ ಡಾ. ಹರೀಶ್ ಬಿ ಶೆಟ್ಟಿ ಸಭೆಯಲ್ಲಿ ಆಹ್ವಾನಿತ ಸದಸ್ಯರಾಗಿ ಉಪಸ್ಥಿತರಿದ್ದು, ಮಹಾರಾಷ್ಟ್ರ ರಾಜ್ಯದ ಪ್ರತಿನಿಧಿಯಾಗಿ ಭಿಕ್ಷಾಟನೆ,  ಮಂಗಳ ಮುಖಿ, ವರಿಷ್ಠ ನಾಗರಿಕರ ಸಮಸ್ಯೆ ಮತ್ತು ರಾಜ್ಯದಲ್ಲಿ ನಿಷೇಧಿಸಲ್ಪಟ್ಟ ತಂಬಾಕು ವಸ್ತುಗಳ ಮಾರಾಟದ ಬಗ್ಗೆ ತಮ್ಮ ಅಭಿಪ್ರಾಯ ಸಭೆಯಲ್ಲಿ ಮಂಡಿಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ರಾಜ್ಯದಲ್ಲಿನ ಸಾಮಾಜಿಕ ಅವ್ಯವಸ್ಥೆಯನ್ನು ಸಚಿವಾಲಯ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸುವಂತೆ ಸಭೆಯ ಅಧ್ಯಕ್ಷರಿಗೆ ಮನವಿ ಮಾಡಿದರು.

      ಸಭೆಯಲ್ಲಿ  ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಚಿವಾಲಯ ಕಾರ್ಯಾಧ್ಯಕ್ಷೆ ರಾಧಿಕಾ ಚಕ್ರವರ್ತಿ, ಕಾರ್ಯದರ್ಶಿ ಸಂಜಯ್ ಪಾಂಡೆ,  ಐಪಿಎಸ್ ಅಧಿಕಾರಿ ನೀರಜ್ ಕುಮಾರ್ ಗುಪ್ತ ಮತ್ತು ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಮಿತಿಯ ನಿರ್ದೇಶಕರಾದ ಸಿದ್ ಗುಪ್ತ ಉಪಸ್ಥಿತರಿದ್ದರು.

      ಸಭೆಯಲ್ಲಿ ಮಹಾರಾಷ್ಟ್ರ ಹೊರತು ಹರಿಯಾಣ ಕೇರಳ ಮತ್ತು ಉತ್ತರ ಪ್ರದೇಶದ ಅಧಿಕೃತ ಸದಸ್ಯರು ರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಈ ವಿಶೇಷ ಸಭೆಯಲ್ಲಿ ಉಪಸ್ಥಿತರಿದ್ದು ತಮ್ಮ ರಾಜ್ಯಗಳ ಸಾಮಾಜಿಕ ರಕ್ಷಣೆ ನ್ಯಾಯ ಹಾಗೂ ಸಬಲೀಕರಣದ ಬಗ್ಗೆ ಸಮಸ್ಯೆಗಳ ಪರಿಹಾರದ ಕುರಿತು ಸುಧೀರ್ಘ ಚರ್ಚೆ ನಡೆಸಿದರು.



Related posts

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಭಾರತೀಯರ ಸುರಕ್ಷತೆಗೆ ಕ್ರಮ: ಸಚಿವ ಜೈಶಂಕರ್ ಭರವಸೆ

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅನಿತಾ ಕಾಸರಗೋಡು ಹೇಳಿಕೆ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರ ಖಂಡನೆ

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಮೊಳಹಳ್ಳಿ ಶಿವರಾವ್ ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ಸಮಗ್ರ ದಾಖಲೀಕರಣ: ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ – ಡಾ. ಎಂ.ಎನ್. ರಾಜೇಂದ್ರ ಕುಮಾರ್

Mumbai News Desk