July 23, 2026
Mumbai News Kannada
ಪ್ರಕಟಣೆ

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.







ಮುಂಬೈ ಕನ್ನಡ ಲೇಖಕಿಯರ ಬಳಗ ಸೃಜನಾ ಮುಂಬಯಿ ಇದರ ವತಿಯಿಂದ ಸಾಹಿತ್ಯ ವಿಮರ್ಶೆ, ಕ್ರತಿ ಬಿಡುಗಡೆ ಹಾಗೂ ಜನಪದ ಹಾಡುಗಳ ಪ್ರಸ್ತುತಿ ಕಾರ್ಯಕ್ರಮವು ಫೆಬ್ರವರಿ 17ರಂದು ಶನಿವಾರ, ಸಂಜೆ 4 ರಿಂದ, ಮಾಟುಂಗಾ ಪೂರ್ವ ಮೈಸೂರು ಅಸೋಸಿಯೇಷನ್ನ ನ ಮೊದಲನೇ ಮಹಡಿಯ ಕಿರು ಸಭಾಗ್ರಹದಲ್ಲಿ ಜರಗಲಿದೆ.

ಅಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪತ್ರಕರ್ತ,ಸಾಂಸ್ಕೃತಿಕ ಸಂಘಟಕ ದಯಾಸಾಗರ ಚೌಟ, ಗೌರವ ಅತಿಥಿಯಾಗಿ ಸ್ಪರೋ ದ ನಿರ್ದೇಶಕಿ, ಡಾ. ಸಿ ಎಸ್ ಲಕ್ಷ್ಮಿ, ಆಗಮಿಸಲಿದ್ದು ಸೃಜನಾ ದ ಸಂಚಾಲಕಿ ಪದ್ಮಜಾ ಮಣ್ಣೂರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅಂದು ಮುಂಬೈ ಖ್ಯಾತ ಲೇಖಕಿ,ಅನುವಾದಕಿ,ಸೃಜನಾದ ಮಾಜಿ ಸಂಚಾಲಕಿ ಶಾಮಲಾ ಮಾಧವ್ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.
ಸಾಹಿತಿ,ಅಕ್ಷಯ ಮಾಸಿಕದ ಮುಖ್ಯ ಸಂಪಾದಕ ಡಾ. ಈಶ್ವರ ಅಲೆಯೂರು ವಿಮರ್ಶೆಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭ ಸೃಜನಾದ ಸದಸ್ಯರಿಂದ ಜನಪದ ಹಾಡುಗಳ ಪ್ರಸ್ತುತಿ ನಡೆಯಲಿದೆ.
ಸಾಹಿತ್ಯ ಪ್ರೇಮಿಗಳು,ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೃಜನಾ ಮುಂಬೈ ಕನ್ನಡ ಲೇಖಕಿಯರ ಬಳಗದವರು ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk

ಮುಂಬಯಿ: ಡಿ. 25ರಂದು ಶ್ರೀ ಕೃಷ್ಣ-ವಿಠ್ಠಲ ಪ್ರತಿಷ್ಠಾನದ 28ನೇ ವರ್ಷದ ಧಾರ್ಮಿಕ ಉತ್ಸವ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಶ್ರೀ ಹಟ್ಟಿಯಂಗಡಿ ಮೇಳದ ಹನ್ನೆರಡನೇ ವರ್ಷದ ಮುಂಬಯಿ ಪ್ರವಾಸ: ಜುಲೈ 10 ರಿಂದ 25 ರವರೆಗೆ ಯಕ್ಷಗಾನ ವೈಭವ

Mumbai News Desk

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk