30 C
Mumbai
April 24, 2026
Mumbai News Kannada
ಪ್ರಕಟಣೆ

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.





ಮುಂಬೈ ಕನ್ನಡ ಲೇಖಕಿಯರ ಬಳಗ ಸೃಜನಾ ಮುಂಬಯಿ ಇದರ ವತಿಯಿಂದ ಸಾಹಿತ್ಯ ವಿಮರ್ಶೆ, ಕ್ರತಿ ಬಿಡುಗಡೆ ಹಾಗೂ ಜನಪದ ಹಾಡುಗಳ ಪ್ರಸ್ತುತಿ ಕಾರ್ಯಕ್ರಮವು ಫೆಬ್ರವರಿ 17ರಂದು ಶನಿವಾರ, ಸಂಜೆ 4 ರಿಂದ, ಮಾಟುಂಗಾ ಪೂರ್ವ ಮೈಸೂರು ಅಸೋಸಿಯೇಷನ್ನ ನ ಮೊದಲನೇ ಮಹಡಿಯ ಕಿರು ಸಭಾಗ್ರಹದಲ್ಲಿ ಜರಗಲಿದೆ.

ಅಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪತ್ರಕರ್ತ,ಸಾಂಸ್ಕೃತಿಕ ಸಂಘಟಕ ದಯಾಸಾಗರ ಚೌಟ, ಗೌರವ ಅತಿಥಿಯಾಗಿ ಸ್ಪರೋ ದ ನಿರ್ದೇಶಕಿ, ಡಾ. ಸಿ ಎಸ್ ಲಕ್ಷ್ಮಿ, ಆಗಮಿಸಲಿದ್ದು ಸೃಜನಾ ದ ಸಂಚಾಲಕಿ ಪದ್ಮಜಾ ಮಣ್ಣೂರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅಂದು ಮುಂಬೈ ಖ್ಯಾತ ಲೇಖಕಿ,ಅನುವಾದಕಿ,ಸೃಜನಾದ ಮಾಜಿ ಸಂಚಾಲಕಿ ಶಾಮಲಾ ಮಾಧವ್ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.
ಸಾಹಿತಿ,ಅಕ್ಷಯ ಮಾಸಿಕದ ಮುಖ್ಯ ಸಂಪಾದಕ ಡಾ. ಈಶ್ವರ ಅಲೆಯೂರು ವಿಮರ್ಶೆಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭ ಸೃಜನಾದ ಸದಸ್ಯರಿಂದ ಜನಪದ ಹಾಡುಗಳ ಪ್ರಸ್ತುತಿ ನಡೆಯಲಿದೆ.
ಸಾಹಿತ್ಯ ಪ್ರೇಮಿಗಳು,ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೃಜನಾ ಮುಂಬೈ ಕನ್ನಡ ಲೇಖಕಿಯರ ಬಳಗದವರು ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಉಬಾರಮಣ್ಣು ಶ್ರೀ ಕೋಡ್ಬಬ್ಬು ದೈವಸ್ಥಾನ ಕೊಳುವೈಲು, ಪಾವಂಜೆ : ಎ. 4 ಹಾಗೂ ಎ. 5ರಂದು ವಾರ್ಷಿಕ ನೇಮೋತ್ಸವ

Mumbai News Desk

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಜ್ವಾಲಾ ಮಹಾಮ್ಮಾಯಿ – ಕಾಲ ಭೈರವ ದೇವಸ್ಥಾನ ಅಲಂಗಾರು, ಮರೋಳಿ, ಮಂಗಳೂರು : ಫೆ 21ರಿಂದ ಪ್ರತಿಷ್ಠಾ ಮಹೋತ್ಸವ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk