32 C
Mumbai
April 24, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.





ಚಿತ್ರ ವರದಿ : ಧನಂಜಯ ಪೂಜಾರಿ

ಬಿಲ್ಲವರ ಅಸೋಸಿಯೇಷನ್, ಮುಂಬೈ
ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.
ಬಿಲ್ಲವರ ಅಸೋಸಿಯೇಷನ್ , ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ರವಿವಾರ ದಿನಾಂಕ 17.10.2023 ರಂದು ಸಂಜೆ 3.00 ರಿಂದ ರಾತ್ರಿ 7.00 ರ ತನಕ ನವರಾತ್ರಿ ಹಬದ್ದ ನಿಮಿತ್ತ ಶಾರದಾ ಪೂಜೆಯು ಬಹಳ ವಿಜೃಂಭಣೆಯೊಂದಿಗೆ ನೆರವೇರಿತು. ಪ್ರಾರಂಭದಲ್ಲಿ ಪುರೋಹಿತ ಐತಪ್ಪ ಸುವರ್ಣರು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಮಂಟಪವನ್ನು ವಿವಿಧ ಹೂ ಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಗುರು ಭಕ್ತರಿಂದ ಸಂಜೇ 4 ರಿಂದ ರಾತ್ರಿ 7 ರ ತನಕ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ತದನಂತರ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ತದನಂತರ ಮಹಿಳಾ ವಿಭಾಗ ಹಾಗು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ನ್ರಿತ್ಯ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಹಾಸ್ ಪಾಲನ್ , ಉಪ ಕಾರ್ಯಾಧ್ಯಕ್ಷರಾದ ಶ್ರೀ ಶ್ರೀಧರ್ ಅಮೀನ್ ಹಾಗು ಶ್ರೀ ಪುರಂಧರ್ ಪೂಜಾರಿ, ಸಹ ಕಾರ್ಯದರ್ಶಿ ಶ್ರೀ ಕೃಷ್ಣ ಪೂಜಾರಿ, ಗೌರವ ಕೋಶಾಧಿಕಾರಿ ಶ್ರೀ ಆನಂದ ಪೂಜಾರಿ, ಸಹ ಕೋಶಾಧಿಕಾರಿ ಶ್ರೀ ಜಗನಾಥ್ ಸನಿಲ್, ಶ್ರೀ ಮಂಜಪ್ಪ ಪೂಜಾರಿ, ಶ್ರೀ ಈಶ್ವರ್ ಕೋಟಿಯನ್, ಶ್ರೀ ತಿಲಕ್ ಸನಿಲ್, ಶ್ರೀ ಜಗದೀಶ್ ಕೋಟಿಯನ್, ಶ್ರೀ ಸೋಮನಾಥ್ ಪೂಜಾರಿ , ಶ್ರೀ ಅನ್ನು ಪೂಜಾರಿ ಇತರ ಸಮಿತಿ ಸದ್ಯಸರು,ಸ್ಥಳೀಯ ಸದ್ಯಸ್ಯರು,ಮಹಿಳಾ ವಿಭಾಗದ ಸದಸ್ಯರು,ಹಾಗು ಯುವಅಭುದಾಯ ಉಪ ಸಮಿತಿಯ ಸದ್ಯಸರುಗಳು ಕಾರ್ಯಕ್ರಮ ಯಶಶ್ವಿಯಾಗಲು ಸಹಕರಿಸಿದರು.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಮಹಿಳಾ ಸಮಿತಿಯ ಸಂಯೋಜನೆಯಲ್ಲಿ ಜರಗಿದ ಮಹಿಳಾ ದಿನಾಚರಣೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾರ್ಥನಾ ಪೂಜಾರಿಗೆ ಶೇ 94.40 ಅಂಕ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ವಿಲೇ ಪಾರ್ಲೆ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ,

Mumbai News Desk

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗೆ ಚುನಾವಣಾ ದಿನಾಂಕ ಪ್ರಕಟ : ಜನವರಿ 15ರಂದು ಮತದಾನ, ಜ. 16ಕ್ಕೆ ಫಲಿತಾಂಶ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Mumbai News Desk