September 6, 2026
Mumbai News Kannada
ಮಹಾರಾಷ್ಟ್ರಸುದ್ದಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ





ಮಹಾರಾಷ್ಟ್ರ ರಾಜ್ಯದ ಮಾಜಿ ಮುಖ್ಯಮಂತ್ರಿ, ಲೋಕಸಭೆಯ ಮಾಜಿ ಸ್ಪೀಕರ್, ಶಿವ ಸೇನಾ ನಾಯಕ ಮನೋಹರ್ ಜೋಶಿ ಅವರು ಇಂದು ಬೆಳ್ಳಿಗ್ಗೆ (ಫೆ.23) ನಿಧನರಾಗಿದ್ದಾರೆ.
86 ವರ್ಷದ ಜೋಶಿ ಅವರು ಅಸೌಖ್ಯದ ನಿಮ್ಮಿತ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕೆತ್ಸೆಗೆ ಸ್ಪಂದಿಸದ ಜೋಶಿ ಅವರು ಇಂದು ಬೆಳ್ಳಿಗೆ 5 ಗಂಟೆಗೆ ಇಹಲೋಕ ತ್ಯಜಿಸಿದರು, ಎಂದು ಅವರ ಕುಟುಂಬಸ್ತರು ತಿಳಿಸಿದ್ದಾರೆ.
ಶಿಕ್ಷಕರಾಗಿ ತನ್ನ ವೃತ್ತಿ ಜೀವನ ಆರಂಭಿಸಿದ ಮನೋಹರ್ ಜೋಶಿ ಶಿವಸೇನೆಗೆ ಸೇರ್ಪಡೆಯಾಗಿ ರಾಜಕೀಯ ರಂಗ ಪ್ರವೇಶಿಸಿದ್ದರು. ಬಳಿಕ ಮುಖ್ಯಮಂತ್ರಿ ಆಗಿ 1995 ರಿಂದ 1999ರ ತನಕ ಸೇವೆ ಸಲ್ಲಿಸಿದ್ದರು.
2002 ರಿಂದ 2004ರ ತನಕ ಲೋಕಸಭಾ ಸ್ಪೀಕರ್ ಆಗಿ ಅವರು ಕಾರ್ಯ ನಿರ್ವಹಿಸಿದ್ದರು.ಶಿವಸೇನೆಯ ಸುಪ್ರೀಮೋ ದಿ. ಬಾಳಸಾಹೇಬ್ ಠಾಕ್ರೆ ಅವರ ಆಪ್ತರಾಗಿ ಮನೋಹರ್ ಜೋಶಿ ಗುರುತಿಸಿ ಕೊಂಡಿದ್ದರು.
ಅವರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ ನ ಶಿವಾಜಿ ಪಾರ್ಕ್ ನ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಸ್ತರು ತಿಳಿಸಿದ್ದಾರೆ.



Related posts

ಸಂಕೋಲಿಗೆ : ಜಾನಕಿ ಸಾಲ್ಯಾನ್ ನಿಧನ

Mumbai News Desk

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ದೆಹಲಿ : ಕೆಂಪು ಕೋಟೆ ಬಳಿ ಸ್ಫೋಟ, 10 ಸಾವು; ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk