32 C
Mumbai
March 7, 2026
Mumbai News Kannada
ಪ್ರಕಟಣೆ

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.





ಸಾಫಲ್ಯ ಸೇವಾ ಸಂಘ (ರಿ).ಮುಂಬಯಿ
ತನ್ನ ಸಮಾಜ ಬಾಂಧವರ ಅಭಿವೃದ್ಧಿಗಾಗಿ ನಿರಂತರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮಹಿಳಾ ವಿಭಾಗವು
ಮಹಿಳಾ ದಿನಾಚರಣೆಯ ಪ್ರಯುಕ್ತ ಸಮಾಜ ಬಾಂಧವರಿಗಾಗಿ
ಸಾಫಲ್ಯ ಸ್ತ್ರೀ ಶಕ್ತಿ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸಾಫಲ್ಯ ಸಮಾಜದ ಯಶಸ್ವಿ ಮಹಿಳೆಯರಿಗೆ ಗೌರವಾರ್ಪಣೆ ಈ ಕಾರ್ಯಕ್ರಮದ ವಿಶೇಷವಾಗಿದೆ.
ಮಾರ್ಚ್ 9 ರ ಶನಿವಾರ ಮಧ್ಯಾಹ್ನ 3.00 ರಿಂದ ಕುರ್ಲಾ ಬಂಟರ ಭವನದ ಆನೆಕ್ಸ್ ಹಾಲ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಾಟ್ಯಗುರು ಕುಮಾರಿ ಲತಿಕಾ ಶ್ರೀಯಾನ್, ಸಮಾಜ ಸೇವಕಿ ಶ್ರೀಮತಿ ಶಕುಂತಲಾ ಪುತ್ರನ್, ಬರಹಗಾರ್ತಿ ಶ್ರೀಮತಿ ಸುಮಿತ್ರಾ ಬಿ ಗುಜರನ್, ಸಂಪಾದಕಿ, ಬರಹಗಾರ್ತಿ ಡಾ. ಜಿ ಪಿ ಕುಸುಮ, ಮತ್ತು ಸಮಾಜ ಸೇವಕಿ ಸುಮಿತ್ರ ವಿ ಕುಂಜರ್ ಅತಿಥಿಗಳಾಗಿ ಆಗಮಿಸಲಿದ್ದಾರೆ.ಈ
ಕಾರ್ಯಕ್ರಮವು ಲಲಿತಾ ಸಹಸ್ರನಾಮ , ಹಳದಿ ಕುಂಕುಮ, ದಿ ಆರ್ಟ್ ಆಫ್ ಲೀವಿಂಗ್ ಹೀಗೆ ಹಲವು ಕಾರ್ಯಕ್ರಮಗಳ ಜೊತೆಗೆ ವಿಶೇಷ ಮನರಂಜನೆಯ ಆಟವನ್ನೂ ಒಳಗೊಂಡಿದೆ. ಸಮಾಜ ಬಾಂಧವರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗುವಂತೆ ಸಹಕರಿಸಬೇಕಾಗಿ ಸಾಫಲ್ಯ ಸೇವಾ ಸಂಘದ ಕಾರ್ಯಾಧ್ಯಕ್ಷ ಶ್ರೀ
ಶ್ರೀನಿವಾಸ ಸಪಲ್ಯ ವಿನಂತಿಸಿದ್ದಾರೆ.

ವಿ.ಸೂ: ಕಾರ್ಯಕ್ರಮ ಮುಗಿದ ನಂತರ ಕುರ್ಲಾ ರೈಲ್ವೆ ಸ್ಟೇಷನ್ ವರೆಗೆ ಬಸ್ಸಿನ ವ್ಯವಸ್ಥೆ ಇದೆ.



Related posts

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ : ಜು. 29ಕ್ಕೆ ನಾಗರ ಪಂಚಮಿ ಉತ್ಸವ

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk